ಸೋಮವಾರದಂದು ಸಂಸತ್ ಮಧ್ಯಾಹ್ನ 2 ಗಂಟೆಗೆ ಸಮಾವೇಶ
ನವದೆಹಲಿ, ಮಾರ್ಚ್ 20, ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆ ವಿಮಾನಯಾನ ಸಂಸ್ಥೆಗಳು ವಿಮಾನಗಳ ಸಮಯವನ್ನು ಬದಲಿಸಿರುವುದರಿಂದ ಸಂಸತ್ ನ ಉಭಯ ಸದನಗಳು ಸೋಮವಾರದಂದು ಮಧ್ಯಾಹ್ನ 2 ಗಂಟೆಗೆ ಸಮಾವೇಶಗೊಳ್ಳಲಿವೆ. ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶುಕ್ರವಾರ ಸದನಗಳಲ್ಲಿ ಈ ಕುರಿತು ಪ್ರಕಟಿಸಿದ್ದಾರೆ. ಗುರುವಾರ ಸದನದಲ್ಲಿ ಚರ್ಚೆಯನ್ನು ಕೈಗೆತ್ತಿಕೊಂಡಾಗ ವಿಮಾನಗಳ ಸಮಯದ ಬದಲಾವಣೆಯಿಂದ ಬೆಳಿಗ್ಗೆ 11 ಗಂಟೆಗೆ ಸದನಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಸದಸ್ಯರು ಹೇಳಿದ್ದಾರೆ ಎಂದು ಸ್ಪೀಕರ್ ಓಂ ಬಿರ್ಲಾ ಲೋಕಸಭೆಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಸೋಮವಾರ 2 ಗಂಟೆಗೆ ಸಮಾವೇಶಗೊಳ್ಳಲು ಸ್ಪೀಕರ್ ನಿರ್ಧರಿಸಿದರು. ಸಮಯ ಬದಲಾವಣೆ ಒಂದು ದಿನಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಅವರು ಹೇಳಿದರು. ಮೇಲ್ಮನೆಯಲ್ಲೂ ವೆಂಕಯ್ಯನಾಯ್ಡು ಇದೇ ಘೋಷಣೆ ಹೊರಡಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 