ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಿ: ತಹಸೀಲ್ದಾರ್ ಗುಂಡಪ್ಪಗೊಳ
Participate in national festivals voluntarily: Tahsildar Gundappagola
ಯರಗಟ್ಟಿ, 17 : ತಾಲೂಕು ಆಡಳಿತದ ವತಿಯಿಂದ ಜನವರಿ 26 ರಂದು ಹಮ್ಮಿಕೊಳ್ಳಲಾಗುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸಂಭ್ರಮದಿಂದ ಆಚರಿಸುವ ಕುರಿತು ತಹಸೀಲ್ದಾರ ಎಮ್ ವಿ ಗುಂಡಪ್ಪಗೊಳ ರವರ ಅಧ್ಯಕ್ಷತೆಯಲ್ಲಿ ತಹಸೀಲ್ದಾರ ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮುಖ್ಯವಾಗಿ ಧ್ವಜಾರೋಹಣ ಮತ್ತು ಪಥಸಂಚಲನವನ್ನು ಶಿಸ್ತುಬದ್ಧವಾಗಿ ಆಯೋಜಿಸುವ ಕುರಿತು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಗಳ ಸಮನ್ವಯತೆಯ ಕುರಿತು ವಿಸ್ತೃತವಾಗಿ ಚರ್ಚಿಸಿ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಿತವಾಗಿ ಹಾಗೂ ಕಡ್ಡಾಯವಾಗಿ ಭಾಗವಹಿಸಬೇಕುದೇಶದಲ್ಲಿ ರಾಷ್ಟ್ರಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರತಿಯೊಬ್ಬ ನಾಗರಿಕನು ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಂ ಪ್ರೇರಿತವಾಗಿ ಹಾಗೂ ಕಡ್ಡಾಯವಾಗಿ ಭಾಗವಹಿಸಬೇಕು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಶು ವೈದ್ಯಾಧಿಕಾರಿ ಡಾ. ಎಂ ವ್ಹಿ ಪಾಟೀಲ, ಹೇಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ, ಶಿವಾನಂದ ಕರಿಗೋನ್ನವರ, ಪ. ಪಂ. ಸದಸ್ಯರಾದ ಹನಮಂತ ಹಾರೂಗೊಪ್ಪ, ಸಲಿಂಬೇಗ ಜಮಾದಾರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಭಾಸ್ಕರ ಹಿರೇಮೆತ್ರಿ, ಕೃಷಿ ಅಧಿಕಾರಿ ಎಂ. ಜಿ. ಕಳಸಪ್ಪನವರ, ಕರವೇ ಅಧ್ಯಕ್ಷ ರಫೀಕ ಡಿ.ಕೆ, ಶಿಕ್ಷಕರಾದ ಬಿ. ಎಸ್. ಆಲದಕಟ್ಟಿ, ಎ. ಎ. ಮಕ್ತುಮನ್ನವರ, ಎಸ್. ಬಿ. ಮಿಕಲಿ, ಎಂ. ಎಂ. ಚಿಲದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 