ಪಕ್ಷದ ಸಂಸ್ಥಾಪನಾ ದಿನ: ಲಕ್ನೋದಲ್ಲಿ ಪ್ರಿಯಾಂಕಾ ಶಾಂತಿ ಮೆರವಣಿಗೆ
ಲಕ್ನೋ,
ಡಿಸೆಂಬರ್ 26, ಕಾಂಗ್ರೆಸ್ ಪಕ್ಷದ 135 ನೇ ಸಂಸ್ಥಾಪನಾದಿನದ ಅಂಗವಾಗಿ ಇದೇ ಶನಿವಾರ ಯುವ ನಾಯಕಿ,
ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ರಾಜ್ಯ ರಾಜಧಾನಿಯಲ್ಲಿ ಶಾಂತಿ ಮೆರವಣಿಗೆ ನಡೆಯಲಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ರಾಜ್ಯ ಪ್ರಧಾನ ಕಚೇರಿಯಿಂದ ಹಜರತ್ಗಂಜ್ನಲ್ಲಿರುವ ಅಂಬೇಡ್ಕರ್
ಪ್ರತಿಮೆವರೆಗೆ ಶಾಂತಿ ಮೆರವಣಿಗೆಯ ನೇತೃತ್ವ ವಹಿಸಲಿದ್ದು, ಸಂವಿಧಾನ
ರಕ್ಷಣೆ ಮಾಡುವ ಪ್ರತಿಜ್ಞಾವಿಧಿಯನ್ನು ನಾಯಕರಿಗೆ
ಭೊದಿಸಲಿದ್ದಾರೆ. ಈ ವಿಷಯವನ್ನು ಪಕ್ಷದ ಮೂಲಗಳು
ಗುರುವಾರ ಯುಎನ್ಐಗೆ ತಿಳಿಸಿದ್ದು, ಕಾರ್ಯಕ್ರಮದ ತಯಾರಿ ಪ್ರಾರಂಭವಾಗಿದೆ ಪ್ರಿಯಾಂಕಾ ಭೇಟಿ ಸಹ ಖಚಿತವಾಗಿದೆ. ಇದಕ್ಕೂ ಮುನ್ನ, ಸಿಎಎ ಪ್ರತಿಭಟನೆಯಲ್ಲಿ
ಮೃತಪಟ್ಟ ಸಂತ್ರಸ್ತರ ಕುಟುಂಬ ಸದಸ್ಯರನ್ನು ಹಾಗೂ ಪಕ್ಷದ ಮುಖಂಡ ಸದಾಫ್ ಜಾಫರ್ ಅವರನ್ನು ಭೇಟಿ ಮಾಡಲು ಲಕ್ನೋ ಜೈಲಿಗೆ ಭೇಟಿ ನೀಡಲು ಅವರು ಇಂದು
ಲಕ್ನೋಗೆ ಭೇಟಿ ನೀಡಬೇಕಾಗಿತ್ತು.ಶನಿವಾರ ಲಖನೌದಲ್ಲಿ ನಡೆಯುತ್ತಿರುವ ಪ್ರಿಯಾಂಕಾ ಕಾರ್ಯಕ್ರಮಕ್ಕೆ
ಬರುವಂತೆ ರಾಜ್ಯದ ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ
ಎಂದು ಮೂಲಗಳು ತಿಳಿಸಿವೆ. ಪ್ರಿಯಾಂಕಾ ಅವರು ಇದೆ 28 ರ ಬೆಳಿಗ್ಗೆ ದೆಹಲಿಯಿಂದ ಆಗಮಿಸಿದ ನಂತರ ರಾಜ್ಯ ಪಕ್ಷದ ಕಚೇರಿಯಲ್ಲಿ ಪಕ್ಷದ ಧ್ವಜ ಹಾರಿಸಲಿದ್ದಾರೆ. ಆದರೆ,
ಸಿಎಎ ಕುರಿತು ಕಳೆದ ವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಹಿಂಸಾಚಾರದ ನಂತರ ಶಾಂತಿ ಮೆರವಣಿಗೆ ನಡೆಸಲು
ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಗೆ ಅನುಮತಿ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 