ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಣೆ ಮಾಡಿದ ಗಸ್ತು ವನಪಾಲಕ ಮುತ್ತುರಾಜ್ ಹಳ್ಳಿ
Patrol forest ranger Muthuraj Halli saved the day with a timely operation
ಮುಂಡಗೋಡ 17: ತಾಲೂಕಿನ ರಾಮಾಪುರ ಗ್ರಾಮದ ಬಸವರಾಜ ಈಳಿಗೇರ್ ಅವರ ಮನೆಯ ಸಮೀಪ ಮಂಗಳವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಹೆಬ್ಬಾವು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿದ ತಕ್ಷಣ ಉರಗ ತಜ್ಞ ಹಾಗೂ ಗಸ್ತು ವನಪಾಲಕರಾದ (ಬೀಟ್ ಫಾರೆಸ್ಟರ್) ಮುತ್ತುರಾಜ್ ಹಳ್ಳಿ ಅವರಿಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮುತ್ತುರಾಜ್ ಹಳ್ಳಿ ಅವರು ಯಾವುದೇ ಅಪಾಯ ಸಂಭವಿಸದಂತೆ ಅತ್ಯಂತ ಎಚ್ಚರಿಕೆಯಿಂದ ಹೆಬ್ಬಾವನ್ನು ಹಿಡಿದು ರಕ್ಷಿಸಿದರು. ನಂತರ ಸಾರ್ವಜನಿಕರಲ್ಲಿ ಹಾವುಗಳ ಬಗ್ಗೆ ಜಾಗೃತಿ ಮೂಡಿಸಿ, ಹಿಡಿದ ಹೆಬ್ಬಾವನ್ನು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಅವರ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾದ ಅನಾಹುತ ತಪ್ಪಿದೆ.
ಈ ಕಾರ್ಯಾಚರಣೆಯಲ್ಲಿ ಪ್ರಕಾಶ ಈಳಿಗೇರ್, ಸುರೇಶ ಈಳಿಗೇರ್, ಪರಶುರಾಮ ಈಳಿಗೇರ್, ಹನುಮಂತ ಕಾರ್ಗಿ, ಮಹೇಶ ಅಕ್ಕಿಹೊಳಿ, ನಾಗರಾಜ ವಡ್ಡರ ಸೇರಿದಂತೆ ಇತರರು ಸಹಕಾರ ನೀಡಿದರು. ವನ ಇಲಾಖೆಯ ತ್ವರಿತ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 