ಸಕ್ಕರೆ ಕಾರ್ಖಾನೆಯ ನಿರ್ಧೆಶಕರಾಗಿ ಪವಾರ್ ಆಯ್ಕೆ
ಲೋಕದರ್ಶನ ವರದಿ
ಮಾಂಜರಿ 29: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಗಡಿ ಪ್ರದೇಶದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಿರುವ ನೆರೆಯ ಮಹಾರಾಷ್ಟ್ರ ರಾಜ್ಯದ ಶಿರೊಳ ತಾಲ್ಲೂಕಿನ ಸೈನಿಕ್ ಟಾಕಳಿ ಗ್ರಾಮದ ಗುರುದತ್ತ ಶುಗರ್ಸ ಸಕ್ಕರೆ ಕಾರ್ಖಾನೆಯ ನಿರ್ಧೆಶಕರಾಗಿ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಣ್ಣಾ ಸಾಹೇಬ್ ಅಪ್ಪಾಸಾಬ್ ಪವಾರ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಮಾಧವರಾವ್ ಘಾಟಗೆ ತಿಳಿಸಿದರು
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಗಡಿ ಭಾಗದಲ್ಲಿರುವ ಗುರುದತ್ತ ಶುಗರ್ಸ ಸಕ್ಕರೆ ಕಾರ್ಖಾನೆ ಖಾಸಗಿ ಒಡೆತನದ ಸಕ್ಕರೆ ಕಾರ್ಖಾನೆಯ ಹಲವಾರು ಸಮಾಜ ಕಾರ್ಯ ಮತ್ತು ಕಬ್ಬು ಬೆಳೆಗಾರರಿಗೆ ಅನುಕೂಲವಾಗುವ ಎಲ್ಲಾ ಮಾದರಿ ಯೋಜನೆಗಳನ್ನು ರೂಪಿಸಿಕೊಂಡು ದೇಶದಲ್ಲಿ ಒಂದು ಮಾದರಿ ಸಕ್ಕರೆ ಕಾರ್ಖಾನೆ ಆಗಿದ್ದು ಈ ಸಕ್ಕರೆ ಕಾರ್ಖಾನೆಯ ಕಳೆದ ಹದಿನೈದು ವರ್ಷಗಳಿಂದ ಕಬ್ಬಿಗೆ ಎಲ್ಲ ಸಕ್ಕರೆ ಕಾರ್ಖಾನೆ ಗಿಂತ ಹೆಚ್ಚಿನ ಬೆಲೆ ನೀಡಲಾಗಿದೆ ಈ ವರ್ಷ ಕೂಡ ಎಪಿ ದರಕ್ಕಿಂತ ಹೆಚ್ಚಿನ ದರ ನೀಡಲಾಗುವುದೆಂದು ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಮಾಧವರಾವ್ ಘಾಟಗೆ ತಿಳಿಸಿದರು.
ಈ ವೇಳೆ ನೂತನವಾಗಿ ನಿರ್ಧೆಶಕರಾಗಿ ಆಯ್ಕೆಯಾಗಿರುವ ಅಣ್ಣಾಸಾಬ ಪವಾರ್ ಇವರನ್ನು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಾಧವರಾವ್ ಘಾಟಗೆ ಸನ್ಮಾನಿಸಿದರು ಈ ವೇಳೆ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ಧೆಶಕ ರಾಹುಲ್ ಘಾಟಿಗೆ ನಿರ್ಧೆಶಕರಾದ ಸಂಜಯ್ ಗಾಯಕ್ವಾಡ್ ಧೋಂಡಿರಾಮ ನಾಗನೇ ಬಾಳಾಸಾಹೆಬ ಪಾಟೀಲ್ ಹಾಗೂ ಇನ್ನಿತರ ರೈತರು ಹಾಜರಿದ್ದರೂ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 