ಮೋದಿ - ಶಾ ಹೆಣೆದ ಸೂತ್ರಕ್ಕೆ ಪವಾರ್ ಮಾರುಹೋದರೆ..!!
ನವದೆಹಲಿ, ನ 23 ಮಹಾರಾಷ್ಟ್ರ ರಾಜಕೀಯಲದಲ್ಲಿ ಹೊಸ ಮತ್ತು ಅನಿರೀಕ್ಷಿತ ಬೆಳವಣಿಗೆಗೆ ಕಾರಣ ಏನು? ಮೊನ್ನೆಯಷ್ಟೆ ಉದ್ದವ ಠಾಕ್ರೆ ಮುಂದಿನ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದ ಶರದ್ ಪವಾರ್ ಕೊನೆಯಲ್ಲಿ ನಿಲುವು ಬದಲಿಸಲು ಕಾರಣವೇನು? ಇದರ ಹಿಂದಿನ ಶಕ್ತಿ ಯಾರು? ಎಂಬ ಚಚರ್ೆಗಳು ನಡೆಯುತ್ತಿವೆ . ಇದರ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕಾಣದ ಕೈಗಳು ಕೆಲಸ ಮಾಡಿವೆ ಎಂಬ ಮಾತು ಕೇಳಿಬಂದಿದೆ. ಇದಕ್ಕೆ ಪೂರಕ ಎಂಬಂತೆ ಗುರುವಾರ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಪವಾರ್ 40 ನಿಮಿಷಗಳ ಕಾಲ ಮಾತುಕತೆ ಮಾಡಿದ್ದರು. ಇಲ್ಲಿಯೇ ಹೊಸ ಸರಕಾರ ರಚನೆಯ ಮಾತುಗಳು ಕೇಳಿ ಬಂದು, ಮಾತುಕತೆ ನಡೆದು ಪವಾರ್ ಅವರ ನಿಲುವು ಕೂಡ ಬದಲಾಯಿತು ಎಂದೂ ಉನ್ನತ ಮೂಲಗಳು ಹೇಳಿವೆ. ಒಟ್ಟಿನಲ್ಲಿ ಮೋದಿ ಮತ್ತು ಶಾ ಹೆಣೆದ ಸೂತ್ರಕ್ಕೆ ಪವಾರ್ ಮಾರು ಹೋಗಿ ರಾತ್ರೋರಾತ್ರಿ ಯಾರು ಊಹೆ ಮಾಡದ ರಾಜಕೀಯ ಬೆಳವಣಿಗೆ ನಡೆಯಿತು ಎಂದೂ ಹೇಳಲಾಗಿದೆ.ಇದರ ಜೊತೆಗೆ ಉದ್ದವ ಠಾಕ್ರೆ ಅವರ ಅಧಿಕಾರದ ಮಿತಿಮೀರಿದ ಆಸೆಯೂ ಕಾರಣ ಎನ್ನಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 