ಕಾಗಿನೆಲೆ ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ
Peace meeting at Kaginele Police Station
ಬ್ಯಾಡಗಿ 23: ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಲಾಗಿದೆ. ಪ್ರತಿಷ್ಠಾಪನೆಗೆ ಕಡ್ಡಾಯವಾಗಿ ಅನುಮತಿ ಪಡೆಯುವುದರೊಂದಿಗೆ ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಕಾಗಿನೆಲೆ ಪಿಎಸ್ಐ ಸಾಗರ ಹೇಳಿದರು.
ಬುಧವಾರ ಕಾಗಿನೆಲೆಯ ಪೊಲೀಸ್ ಇಲಾಖೆ ವತಿಯಿಂದ ನಡೆದ ಗೌರಿ ಗಣೇಶ ಹಬ್ಬದ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಗಿನೆಲೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈವರೆಗೆ ಯಾವುದೇ ಅಹಿತಕರ ಘಟನೆ ನಡೆದ ಇತಿಹಾಸವಿಲ್ಲ. ಅಣ್ಣ ತಮ್ಮಂದಿರಂತೆ ಒಡನಾಟ ಹೊಂದಿದ್ದಾರೆ.ಗ್ರಾಮದ ಜನರ ಸುರಕ್ಷತೆ ಮುಖ್ಯ. ಆಚರಣೆ ಸಂತೋಷದಿಂದ ಕೂಡಿರಬೇಕು. ಸರ್ಕಾರದ ನಿಯಮಾನುಸರ ಆಚರಿಸುವುದು ಸೂಕ್ತ. ಪರಿಸರಕ್ಕೆ ಹಾನಿಯಾಗದ ಮಣ್ಣಿನ ಗಣಪ ಬಳಸಬೇಕು. ಗಣೇಶ ವಿಸರ್ಜನೆಯನ್ನು ಗುರುತಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು. ಡಿಜೆ ಬಳಕೆ ವಿಚಾರದಲ್ಲಿ ಸರ್ಕಾರ ಹೊರಡಿಸಿರುವ ಸುತ್ತೋಲೆ ಪಾಲಿಸಲೇಬೇಕು ಎಂದರು.
ಸಭೆಯಲ್ಲಿ ಸಮಾಜ ಸೇವಕಿ ಪ್ರೇಮಾ ಜೋಗುಳ, ಜಗದೀಶ್ ಪೂಜಾರ ಮಾತನಾಡಿದರು. ಕಾರ್ಯಕ್ರಮದಲ್ಲಿ ಸದು ಪಾಟೀಲ, ಮುನ್ನಾ ಎಲಿಗಾರ, ತಸಿಲ್ದಾರ್ ಅಂಜುಮನ್ ಅಧ್ಯಕ್ಷ ಹಜರತ್ತಲಿ ಕೋಧಿ ವಕೀಲ್ ಮತ್ತೆಹಳ್ಳಿ ಸೇರಿದಂತೆ ಇತರರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 