ಜನರು ಪ್ರವಾಹದ ಆತಂಕ ಪಡುವ ಅಗತ್ಯವಿಲ್ಲ: ಸಂಪಗಾವಿ
People need not worry about floods: Sampagavi
ಮಾಂಜರಿ 23: ಕೃಷ್ಣಾ ಸೇರಿದಂತೆ ದೂಧಗಂಗಾ, ವೇದಗಂಗಾ ನದಿಗಳಿಗೆ ಇವತ್ತು ನೀರು ಕಡಿಮೆ ಆಗುತ್ತೆ ಜನರು ಪ್ರವಾಹದ ಕುರಿತು ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಹೇಳಿದರು.
ಅವರು ಇವತ್ತು ಚಿಕ್ಕೋಡಿ ತಾಲೂಕಿನ ಇಂಗಳಿ ಮತ್ತು ಸಂಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಮಾತನಾಡಿ ಅವರು ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.
ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಇಳಿಕೆ ಆಗುತ್ತೆ. ಜನರು ನದಿಯ ಹತ್ತಿರ ಸ್ನಾನ, ಬಟ್ಟೆ, ವಾಹನಗಳನ್ನು ತೊಳೆಯಲು ಹೋಗಬಾರದೆಂದು ಮನವಿಯನ್ನು ಮಾಡಿಕೊಳ್ಳುತ್ತೇವೆ. ವೀರಭದ್ರೇಶ್ವರ ದೇವಸ್ಥಾನ ಮುಳಗಡೆಯಾಗಿದೆ. ಅಮವಾಸ್ಯೆ ಇರುವ ಕಾರಣ ಭಕ್ತರು ದೂರದಿಂದ ನಿಂತು ದೇವರ ದರ್ಶನ ಪಡೆಯಬೇಕು ಹಾಗೂ ಪ್ರವಾಹ ಮುಂಜಾಗ್ರತಾ ಕ್ರಮವಾಗಿ ಬೋಟ, ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ ರಾಜೇಶ್ ಬುರ್ಲಿ ಕಂದಾಯ ನೀರೀಕ್ಷಕ ರಾಮಣ್ಣ ನಾಯಕ್ ಗ್ರಾಮ ಆಡಳಿತ ಅಧಿಕಾರಿ ಮನೋಜ್ ಕಾಂಬಳೆ ಹಾಗೂ ಇನ್ನುಳಿದ ಅಧಿಕಾರಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 