ಜನರು ಪ್ರವಾಹದ ಆತಂಕ ಪಡುವ ಅಗತ್ಯವಿಲ್ಲ: ಸಂಪಗಾವಿ
People need not worry about floods: Sampagavi
ಮಾಂಜರಿ 23: ಕೃಷ್ಣಾ ಸೇರಿದಂತೆ ದೂಧಗಂಗಾ, ವೇದಗಂಗಾ ನದಿಗಳಿಗೆ ಇವತ್ತು ನೀರು ಕಡಿಮೆ ಆಗುತ್ತೆ ಜನರು ಪ್ರವಾಹದ ಕುರಿತು ಆತಂಕ ಪಡುವ ಅಗತ್ಯ ಇಲ್ಲ ಎಂದು ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಹೇಳಿದರು.
ಅವರು ಇವತ್ತು ಚಿಕ್ಕೋಡಿ ತಾಲೂಕಿನ ಇಂಗಳಿ ಮತ್ತು ಸಂಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಮಾತನಾಡಿ ಅವರು ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.
ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಇಳಿಕೆ ಆಗುತ್ತೆ. ಜನರು ನದಿಯ ಹತ್ತಿರ ಸ್ನಾನ, ಬಟ್ಟೆ, ವಾಹನಗಳನ್ನು ತೊಳೆಯಲು ಹೋಗಬಾರದೆಂದು ಮನವಿಯನ್ನು ಮಾಡಿಕೊಳ್ಳುತ್ತೇವೆ. ವೀರಭದ್ರೇಶ್ವರ ದೇವಸ್ಥಾನ ಮುಳಗಡೆಯಾಗಿದೆ. ಅಮವಾಸ್ಯೆ ಇರುವ ಕಾರಣ ಭಕ್ತರು ದೂರದಿಂದ ನಿಂತು ದೇವರ ದರ್ಶನ ಪಡೆಯಬೇಕು ಹಾಗೂ ಪ್ರವಾಹ ಮುಂಜಾಗ್ರತಾ ಕ್ರಮವಾಗಿ ಬೋಟ, ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ ರಾಜೇಶ್ ಬುರ್ಲಿ ಕಂದಾಯ ನೀರೀಕ್ಷಕ ರಾಮಣ್ಣ ನಾಯಕ್ ಗ್ರಾಮ ಆಡಳಿತ ಅಧಿಕಾರಿ ಮನೋಜ್ ಕಾಂಬಳೆ ಹಾಗೂ ಇನ್ನುಳಿದ ಅಧಿಕಾರಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 