ರೌಡಿ ಶೀಟರ್ ಮೇಲೆ ಪೈರಿಂಗ್
ಬೆಂಗಳೂರು, ಅ 26: ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿದ್ದಾರೆ. ರೌಡಿ ಶೀಟರ್ ಹರೀಶ್ ಅಲಿಯಾಸ್ ರಾಬರಿ ಹರೀಶ್ ಬಂಧಿತ ಆರೋಪಿ. ಇತ್ತೀಚಿಗೆ ಈತ ದಾಸರಹಳ್ಳಿ ಬಳಿಯ ಅಂಗಡಿಯೊಂದನ್ನು ದರೋಡೆ ಮಾಡಿದ್ದ. ಇಂದು ಬೆಳಗ್ಗೆ ಆರೋಪಿ ಹರೀಶ್, ಅಬ್ಬಿಗೆರೆ ಬಳಿ ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದಿದ್ದ ಪೀಣ್ಯ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುದ್ದುರಾಜ್ ತಮ್ಮ ತಂಡದೊಂದಿಗೆ ಆರೋಪಿಯನ್ನು ಬಂಧಿಸಲು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸಂದರ್ಭದಲ್ಲಿ ಆರೋಪಿ ಹರೀಶ್, ಪೊಲೀಸ್ ಪೇದೆಗಳಾದ ಲಕ್ಷ್ಮೀನಾರಾಯಣ್ ಮತ್ತು ರವಿಕುಮಾರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ಮುದ್ದುರಾಜ್ ಗಾಳಿಯಲ್ಲಿ ಗುಂಡುಹಾರಿಸಿ ಶರಣಾಗುವಂತೆ ಆರೋಪಿಗೆ ಸೂಚಿಸಿದ್ದಾರೆ. ಆದರೆ ಅವರ ಮಾತನ್ನು ಲೆಕ್ಕಿಸದೆ ಹಲ್ಲೆಗೆ ಮುಂದಾದಾಗ ಅವರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ತಕ್ಷಣ ಕುಸಿದು ಬಿದ್ದ ಆತನನ್ನು ಸುತ್ತುವರಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಬಳಿಕ ಗಾಯಾಳು ಪೇದೆಗಳನ್ನು ಕೂಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 