ತೇಜಸ್ ಎಕ್ಸ್ ಪ್ರೆಸ್ ರೈಲಿಗೆ ಪಿಯೂಷ್ ಗೋಯಲ್ ಹಸಿರು ನಿಶಾನೆ
ಅಹಮದಾಬಾದ್ (ಗುಜರಾತ್), ಜ ೧೭,ಅಹಮದಾಬಾದ್-ಮುಂಬೈ ತೇಜಸ್ ಎಕ್ಸ್ಪ್ರೆಸ್ ರೈಲಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಬೆಳಿಗ್ಗೆ ಹಸಿರು ನಿಶಾನೆ ತೋರಿಸಿದರು.ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ತೇಜಸ್ ರೈಲಿನಲ್ಲಿ ೭೩೬ ಮಂದಿ ಪ್ರಯಾಣಿಸಬಹುದು. ಅಹಮದಾಬಾದ್-ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ವಾರದಲ್ಲಿ ಆರು ದಿನ ಸಂಚರಿಸುವ ಈ ರೈಲನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೊಂದಿಗೆ ಉದ್ಘಾಟಿಸಿದರು. ಈ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಐ ಆರ್ ಸಿ ಟಿಸಿ ಉಚಿತವಾಗಿ ೨೫ ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಲಿದೆ. ರೈಲು ಒಂದು ಗಂಟೆ ವಿಳಂಬವಾದರೆ ೧೦೦ ರೂಪಾಯಿ, ಎರಡು ಗಂಟೆಗೂ ಹೆಚ್ಚು ಕಾಲ ವಿಳಂಬ ವಾದರೆ ಪ್ರಯಾಣಿಕರಿಗೆ ೨೫೦ ರೂ ನಷ್ಟ ಪರಿಹಾರವನ್ನು ನೀಡಲಿದೆ. ಪ್ರತಿಯೊಬ್ಬ ಪ್ರಯಾಣಿಕರಿಗೆ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಬಾಟಲ್ ಪೂರೈಸುವ ಜತೆಗೆ, ಪ್ರತಿ ಬೋಗಿಯಲ್ಲಿ ಆರ್ವೊ ವಾಟರ್ ಫಿಲ್ಟರ್ ಅಳವಡಿಸಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 