ತೇಜಸ್ ಎಕ್ಸ್ ಪ್ರೆಸ್ ರೈಲಿಗೆ ಪಿಯೂಷ್ ಗೋಯಲ್ ಹಸಿರು ನಿಶಾನೆ
ಅಹಮದಾಬಾದ್ (ಗುಜರಾತ್), ಜ ೧೭,ಅಹಮದಾಬಾದ್-ಮುಂಬೈ ತೇಜಸ್ ಎಕ್ಸ್ಪ್ರೆಸ್ ರೈಲಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಬೆಳಿಗ್ಗೆ ಹಸಿರು ನಿಶಾನೆ ತೋರಿಸಿದರು.ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ತೇಜಸ್ ರೈಲಿನಲ್ಲಿ ೭೩೬ ಮಂದಿ ಪ್ರಯಾಣಿಸಬಹುದು. ಅಹಮದಾಬಾದ್-ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ವಾರದಲ್ಲಿ ಆರು ದಿನ ಸಂಚರಿಸುವ ಈ ರೈಲನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರೊಂದಿಗೆ ಉದ್ಘಾಟಿಸಿದರು. ಈ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಐ ಆರ್ ಸಿ ಟಿಸಿ ಉಚಿತವಾಗಿ ೨೫ ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಲಿದೆ. ರೈಲು ಒಂದು ಗಂಟೆ ವಿಳಂಬವಾದರೆ ೧೦೦ ರೂಪಾಯಿ, ಎರಡು ಗಂಟೆಗೂ ಹೆಚ್ಚು ಕಾಲ ವಿಳಂಬ ವಾದರೆ ಪ್ರಯಾಣಿಕರಿಗೆ ೨೫೦ ರೂ ನಷ್ಟ ಪರಿಹಾರವನ್ನು ನೀಡಲಿದೆ. ಪ್ರತಿಯೊಬ್ಬ ಪ್ರಯಾಣಿಕರಿಗೆ ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಬಾಟಲ್ ಪೂರೈಸುವ ಜತೆಗೆ, ಪ್ರತಿ ಬೋಗಿಯಲ್ಲಿ ಆರ್ವೊ ವಾಟರ್ ಫಿಲ್ಟರ್ ಅಳವಡಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 