ಎಎಪಿ ಚುನಾವಣಾ ಪ್ರಚಾರಗಳಿಗೆ ಪೊಲೀಸರ ಅಡ್ಡಿ: ಬಿಜೆಪಿ ದೂರಿದ ಕೇಜ್ರಿವಾಲ್
Police obstructing AAP election campaigns: BJP complains Kejriwal
ನವದೆಹಲಿ 22: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷ ಕೈಗೊಳ್ಳುವ ಪ್ರಚಾರ ಕಾರ್ಯಕ್ರಮಗಳನ್ನು ಅಡ್ಡಿಪಡಿಸಲು ಬಿಜೆಪಿ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಆರೋಪಿಸಿದ್ದಾರೆ.
ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ಪೊಲೀಸರು ಬಿಜೆಪಿ ಜತೆಗಿದ್ದಾರೆ. ಜನರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿಲ್ಲ. ಎಎಪಿ ನಡೆಸುವ ರ್ಯಾಲಿಗಳಿಗೆ ಅಡ್ಡಿಪಡಿಸುವಂತೆ ಗೃಹ ಸಚಿವಾಲಯದಿಂದ ನೇರ ಸೂಚನೆಗಳು ಬರುತ್ತಿವೆ ಎಂದು ದೂರಿದ್ದಾರೆ.
ಬಿಜೆಪಿ ನಡೆಸುವ ಚುನಾವಣಾ ಪ್ರಚಾರಗಳಿಗೆ ಪೊಲೀಸರು ಅನುವು ಮಾಡಿಕೊಡುತ್ತಾರೆ. ಆದರೆ ಎಎಪಿ ಕೈಗೊಳ್ಳುವ ಪ್ರಚಾರ ಕಾರ್ಯಕ್ರಮಗಳಿಗೆ ಪೊಲೀಸರು ಅಡ್ಡಿಪಡಿಸುತ್ತಾರೆ. ದೆಹಲಿಯಲ್ಲಿ ಬಿಜೆಪಿ ಐತಿಹಾಸಿಕ ಸೋಲು ಅನುಭವಿಸುತ್ತದೆ. ಇದೇ ಕಾರಣದಿಂದಾಗಿ ಪೊಲೀಸರ ಬೆಂಬಲದೊಂದಿಗೆ ಗೂಂಡಾಗಿರಿ ಪ್ರದರ್ಶಿಸುತ್ತಿದೆ. ಆದರೆ ಈ ಬಾರಿ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 