ಉಗ್ರರ ಜೊತೆ ಪೊಲೀಸ್ ಅಧಿಕಾರಿ ಬಂಧನ
ಶ್ರೀನಗರ, ಜ12 : ಜಮ್ಮು ಕಾಶ್ಮೀರ ಪೊಲೀಸರು ಇದೆ ಮೊದಲ ಭಾರಿಗೆ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಉಗ್ರರನ್ನು ಕುಲ್ಗಾಂ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಶ್ರೀನಗರದ ಬಳಿಯಿರುವ ಪೊಲೀಸ್ ಅಧಿಕಾರಿಯ ಮನೆ ಮೇಲೆ ದಾಳಿ ಮಾಡಿ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆ ಸಮಯದಲ್ಲಿ ಮೀರ್ ಬಜಾರ್ ರಾಷ್ಟ್ರೀಯ ಹೆದ್ದಾರಿಯ ಬಳಿ ವಾಹನವೊಂದರಲ್ಲಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇಬ್ಬರು ಉಗ್ರರರನ್ನು ಬಂಧಿಸಿ ಅವರಿಂದ 5 ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ದೇಶದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉಗ್ರರೊಂದಿಗೆ ಬಂಧಿತರಾದ ಮೊದಲ ಘಟನೆ ಇದಾಗಿದೆ. ಈ ಪೊಲೀಸ್ ಅಧಿಕಾರಿ ಕಳೆದ ಬಾರಿ ರಾಷ್ಟ್ರಪತಿ ಪದಕ ವಿಜೇತರಾಗಿದ್ದರು ಎಂದೂ ವರದಿಯಾಗಿದೆ.
ಬಂಧಿತ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸೈಯದ್ ನವೀದ್ ಬಾಬಾ ದಕ್ಷಿಣ ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾಗಿದ್ದು, ಮತ್ತೊಬ್ಬ ಉಗ್ರನನ್ನು ಆಸಿಫ್ ರಥರ್ ಎಂದೂ ಗುರುತಿಸಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 