ಓವರ್ಲೋಡ್ ಟಿಪ್ಪರ್, ಲಾರಿಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಪೊಲೀಸರು
Police put a stop to the movement of overloaded tippers and lorries
ಲಕ್ಷ್ಮೇಶ್ವರ, ಜು.11: ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಓವರ್ಲೋಡ್ ಟಿಪ್ಪರ್ ಹಾಗೂ ಲಾರಿಗಳ ಸಂಚಾರ ಹೆಚ್ಚಾಗಿದ್ದು, ಇದರಿಂದ ರಸ್ತೆಗಳು ಹಾಳಾಗುತ್ತಿವೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಸಿಪಿಐ ಬಿ.ವಿ. ನಾಮೇಗೌಡ ಹಾಗೂ ಪಿಎಸ್ಐ ನಾಗರಾಜ ಗಡದ ಅವರ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಓವರ್ಲೋಡ್ ಹೊತ್ತು ಸಂಚರಿಸುತ್ತಿದ್ದ ಟಿಪ್ಪರ್ ಮತ್ತು ಲಾರಿಗಳನ್ನು ತಡೆದು ಪರೀಶೀಲನೆ ನಡೆಸಿದರು.
ಕಾರ್ಯಾಚರಣೆಯ ವೇಳೆ ಮಣ್ಣು, ಜಲ್ಲಿ, ಮರಳು ಸೇರಿದಂತೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸರಕು ಸಾಗಿಸುತ್ತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆದು, ಸಂಬಂಧಿಸಿದ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳನ್ನು ನಿರಂತರವಾಗಿ ಮುಂದುವರಿಸುವಂತೆ ಆಗ್ರಹಿಸಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 