ಓವರ್ಲೋಡ್ ಟಿಪ್ಪರ್, ಲಾರಿಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಪೊಲೀಸರು
Police put a stop to the movement of overloaded tippers and lorries
ಲಕ್ಷ್ಮೇಶ್ವರ, ಜು.11: ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಓವರ್ಲೋಡ್ ಟಿಪ್ಪರ್ ಹಾಗೂ ಲಾರಿಗಳ ಸಂಚಾರ ಹೆಚ್ಚಾಗಿದ್ದು, ಇದರಿಂದ ರಸ್ತೆಗಳು ಹಾಳಾಗುತ್ತಿವೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಸಿಪಿಐ ಬಿ.ವಿ. ನಾಮೇಗೌಡ ಹಾಗೂ ಪಿಎಸ್ಐ ನಾಗರಾಜ ಗಡದ ಅವರ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಓವರ್ಲೋಡ್ ಹೊತ್ತು ಸಂಚರಿಸುತ್ತಿದ್ದ ಟಿಪ್ಪರ್ ಮತ್ತು ಲಾರಿಗಳನ್ನು ತಡೆದು ಪರೀಶೀಲನೆ ನಡೆಸಿದರು.
ಕಾರ್ಯಾಚರಣೆಯ ವೇಳೆ ಮಣ್ಣು, ಜಲ್ಲಿ, ಮರಳು ಸೇರಿದಂತೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸರಕು ಸಾಗಿಸುತ್ತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆದು, ಸಂಬಂಧಿಸಿದ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳನ್ನು ನಿರಂತರವಾಗಿ ಮುಂದುವರಿಸುವಂತೆ ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 