ಶಿವಸೇನೆ, ಎನ್ ಸಿ ಪಿ, ಕಾಂಗ್ರೆಸ್ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ಮುಂಬೈ, ನ 11 : ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿ ಪಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚನೆ ಮಾಡಲಿದೆಯೇ? ಬಿಜೆಪಿ ಸರ್ಕಾರ ರಚನೆಗೆ ಆಸಕ್ತಿ ತೋರದ ಕಾರಣ, ಎರಡನೇ ಅತಿದೊಡ್ಡ ಪಕ್ಷವಾಗಿರುವ ಶಿವಸೇನೆಗೆ ರಾಜ್ಯಪಾಲರು ಆಹ್ವಾನ ನೀಡಿದ್ದು ಮೂರೂ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸರ್ಕಾರ ರಚನೆಯ ಸಂಬಂಧ ಶಿವಸೇನೆಯ ನಾಯಕ ಸಂಜಯ್ ರಾವತ್ ಇಂದು ಮುಂಬೈ ಮತ್ತು ದೆಹಲಿಯಲ್ಲಿ ಕ್ರಮವಾಗಿ ಶರದ್ ಪವಾರ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಸರ್ಕಾರ ರಚನೆಯ ಸಂಬಂಧ ಸೋಮವಾರ ಸಂಜೆ 7.30 ರೊಳಗೆ ಶಿವಸೇನೆ ತನ್ನ ಅಭಿಪ್ರಾಯವನ್ನು ರಾಜ್ಯಪಾಲರಿಗೆ ತಿಳಿಸಬೇಕಾಗಿದೆ. ಮೂರೂ ಪಕ್ಷಗಳಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಶಿವಸೇನೆ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದೋ ಇಲ್ಲವೋ ಎಂಬುದು ರಾತ್ರಿಯ ವೇಳೆಗೆ ಸ್ಪಷ್ಟವಾಗಲಿದೆ. ಈ ನಡುವೆ ಶಿವಸೇನೆಗೆ ಬೆಂಬಲ ನೀಡಬೇಕಾದಲ್ಲಿ ಬಿಜೆಪಿಯ ಸಂಬಂಧವನ್ನು ಮುರಿದುಕೊಂಡು ಹೊರಬರಬೇಕು ಎಂದು ಎನ್ ಸಿ ಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬಿಗಿಪಟ್ಟು ಹಾಕಿವೆ. ಒಂದು ವೇಳೆ ಶಿವಸೇನೆ, ಎನ್ ಸಿ ಪಿ ಮತ್ತು ಕಾಂಗ್ರೆಸ್ ಜೊತೆ ಸೇರಿಕೊಂಡು ಸರ್ಕಾರ ರಚನೆ ಮಾಡುವುದೇ ಆದಲ್ಲಿ, ಕೇಂದ್ರದಲ್ಲಿ ಶಿವಸೇನೆಯ ವತಿಯಿಂದ ಮಂತ್ರಿಯಾಗಿರುವ ಅರವಿಂದ್ ಸಾವಂತ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಗುತ್ತದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 