ಪುರಸಭೆ ಮುಖ್ಯಾಧಿಕಾರಿಯಾಗಿ ಪೂಜಾರ
ಲೋಕದರ್ಶನ
ವರದಿ
ಬ್ಯಾಡಗಿ 13:
ಮಾನ್ಯ ಉಚ್ಚ ನ್ಯಾಯಾಲಯ ನೀಡಿದ್ದ
ತಡೆಯಾಜ್ಞೆಯನ್ನು ತೆರುವುಗೊಳಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪುರಸಭೆಗೆ ವಿ.ಎಂ.ಪೂಜಾರ
ಅವರನ್ನು ಮುಖ್ಯಾಧಿಕಾರಿಯಾಗಿ ಮುಂದುವರೆಯುವಂತೆ ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವಿ.
ವೆಂಕಟೇಶ್ ಆದೇಶಿಸಿದ್ದಾರೆ.
ರಾಜ್ಯ ಸಕರ್ಾರ ಕಳೆದ ಸೆ.12 ರಂದು
ಆದೇಶವೊಂದನ್ನು ಹೊರಡಿಸಿ ವಿ.ಎಂ.ಪೂಜಾರ
ಅವರನ್ನು ವಗರ್ಾವಣೆ ಮೇರೆಗೆ ಸ್ಥಳೀಯ ಪುರಸಭೆಗೆ ಮುಖ್ಯಾಧಿಕಾರಿಯನ್ನಾಗಿ ನಿಯೋಜನೆ ಮಾಡಿತ್ತು, ಆದರೆ ಸಕರ್ಾರದ ಆದೇಶವನ್ನು
ಪ್ರಶ್ನಿಸಿ ಬಿ.ಎ.ನಾಗಲಾಪೂರ
ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು, ಅಜರ್ಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಸೆ.18 ರಂದು ಪೂಜಾರ ಅವರ
ವಗರ್ಾವಣೆ ಆದೇಶಕ್ಕೆ ತಡೆಯಾಜ್ಞೆ (ಸ್ಟೇ) ನೀಡಿತ್ತು. ಹೀಗಾಗಿ ಕಳೆದ ಸೆ.25 ರಂದು
ಮತ್ತೆ ಮುಖ್ಯಾಧಿಕಾರಿಯಾಗಿ ಬಿ.ಎ.ನಾಗಲಾಪೂರ
ಅಧಿಕಾರ ವಹಿಸಿಕೊಂಡಿದ್ದರು.
ತಡೆಯಾಜ್ಞೆ
ತೆರವು:ಕಳೆದ ಸೆ.25 ರಂದು
ಮಾನ್ಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಬಿ.ಎ.ನಾಗಲಾಪೂರ
ಅವರನ್ನು ಬ್ಯಾಡಗಿ ಪುರಸಭೆ ಮುಖ್ಯಾಧಿಕಾರಿ ಹುದ್ದೆಯಿಂದ ತೆರವುಗೊಳಿಸಿ, ಮೊದಲಿದ್ದ ವಿ.ಎಂ.ಪೂಜಾರ
ಅವರನ್ನು ಮುಖ್ಯಾಧಿಕಾರಿಯನ್ನಾಗಿ ನಿಯೋಜನೆ ಮಾಡಿ ಆದೇಶಿಸಿದ್ದಾರೆ. ಮತ್ತು
ಮೊದಲಿದ್ದ ಬಿ.ಎ.ನಾಗಲಾಪೂರ
ಅವರು ವಾರದೊಳಗಾಗಿ ಇಲಾಖೆಯ ಮುಖ್ಯಸ್ಥರಿಗೆ ವರದಿ ಮಾಡಿಕೊಳ್ಳಬೇಕು ಮತ್ತು
ಒಂದೇ ವಾರದಲ್ಲಿ ನಾಗಲಾಪೂರ ಅವರಿಗೆ ಬೇರೊಂದು (ಪ್ಲೇಸ್ಮೆಂಟ್) ಸ್ಥಳಕ್ಕೆ ಮರು ವಗರ್ಾವಣೆ ಆದೇಶ
ನೀಡುವಂತೆಯೂ ತಡೆಯಾಜ್ಞೆ ತೆರವು ಆದೇಶದಲ್ಲಿ ಸೂಚಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 