ಹೂವಿನಮರಡಿ ಗ್ರಾಮ: ಚಿರತೆ ಹಾವಳಿ, ಕುರಿಗಳ ಸಾವು
ಲೋಕದರ್ಶನವರದಿ
ರಾಣೇಬೆನ್ನೂರು09: ತಾಲೂಕಿನ ಹುಲಿಕಟ್ಟಿ ಗ್ರಾಮವೂ ಸೇರಿದಂತೆ ಬಹುತೇಕ ಗ್ರಾಮಾಂತರ ಪ್ರದೇಶಗಳ ಜಮೀನುಗಳಲ್ಲಿ ಚಿರತೆಗಳು ಸಾಗಿ ಹೋಗುತ್ತಿರುವ ಪ್ರಕರಣಗಳು ವರದಿಯಾಗುತ್ತಲಿವೆ.
ಮೊನ್ನೆಯಷ್ಟೇ ಹುಲಿಕಟ್ಟಿ ಬಳಿಯ ಹೂವಿನಮರಡಿ ಗ್ರಾಮದ ಮನೆಯೊಂದರಲ್ಲಿ ಚಿರತೆಗಳು ಕುರಿಗಳ ಮೇಲೆ ದಾಳಿ ನಡೆಸಿ ರಕ್ತ ಕುಡಿದಿವೆ.
ಕಳೆದ 6ರಂದು ರವಿವಾರ ರಾತ್ರಿ 12ರಿಂದ 1 ರ ಅವಧಿಯಲ್ಲ ಈ ದಾಳಿ ನಡೆದಿದ್ದು, ಇದರಿಂದ ಹಾಲಪ್ಪ ಮಲ್ಲಪ್ಪ ಅರಳಿಕಟ್ಟಿ ಇವರಿಗೆ ಸಂಬಂಧಿಸಿದ ಟಗರುಗಳಾಗಿವೆ. ಚಿರತೆ ದಾಳಿಯಿಂದ ಸುಮಾರು 70 ಸಾವಿರ ರೂ.ಗಳ ಹಾನಿ ಸಂಭವಿಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪಶು ವೈದ್ಯಕೀಯ ಅಧಿಕಾರಿಗಳು ತಪಾಸಣೆ ನಡೆಸಿ ಚಿರತೆಯಿಂದಾದ ದಾಳಿಯೆಂದು ಖಚಿತಪಡಿಸಿದ್ದಾರೆ.
ಪದೇ ಪದೇ ಈ ಭಾಗದಲ್ಲಿ ಚಿರತೆ ಹಾವಳಿ ಸಂಭವಿಸುತ್ತಿದ್ದು, ಇಲಾಖೆ ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರ, ರೈತರ ಮತ್ತು ಕುರಿಗಾಯಿಗಳ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 