‘ವಾಕ್ಥಾನ್ ಸ್ಪರ್ಧೆ’ಯಲ್ಲಿ ಪ್ರಶಾಂತ ನಾಯ್ಕಗೆ ದ್ವಿತೀಯ ಸ್ಥಾನ
Prashanth Nayak wins second place in 'Walkathon Competition'
ಕಾರವಾರ 15: ನಗರದ ರೋಟರಿ ಕ್ಲಬ್ (ಪಶ್ಚಿಮ) ರವರು ಸಂಘಟಿಸಿದ 10 ಕಿ.ಮಿ. ನಡಿಗೆಯ “ವಾಕ್ಥಾನ್” ಸ್ಪರ್ಧೆಯಲ್ಲಿ ಬಾಲಮಂದಿರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ ರಾಮಚಂದ್ರ ನಾಯ್ಕ ಇವರು ದ್ವಿತೀಯ ಸ್ಥಾನವನ್ನು ಪಡೆದು ಟ್ರೋಪಿ ಮತ್ತು 3000 ರೂಪಾಯಿ ಬಹುಮಾನವನ್ನು ಪಡೆದಿರುತ್ತಾರೆ. ಇವರ ಈ ಸಾಧನೆಯನ್ನು ಮೆಚ್ಚಿ ಹಾಗೂ ವಿವಿಧ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಇವರು ಭಾಗವಹಿಸಿ ಬಹುಮಾನ ಗಳಿಸಿದ್ದಕ್ಕಾಗಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿಯವರು ಹಾಗೂ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಅಂಜಲಿ ಎಸ್. ಮಾನೆ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 