ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿ
Pratibha Karanji is helpful for personality development of children
ಹೂವಿನ ಹಡಗಲಿ 12: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಹೇಳಿದರು.ಪಟ್ಟಣದ ವಿದ್ಯಾಂಜಲಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ ಎಂದರು. ಶಿಕ್ಷಕರ ಸಂಘದ ಕಾರ್ಯದರ್ಶಿ ವಿ ಎಚ್ ಯೇಸು ಮಾತನಾಡಿ ಗಾಯನ ಅಭಿನಯ ನೃತ್ಯ ವಿವಿಧ ಪ್ರಕಾರಗಳ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕಾಗಿದೆ ಎಂದರು.ವಿದ್ಯಾಂಜಲಿ ಶಾಲೆಯ ಸಂಸ್ಥೆ ಅಧ್ಯಕ್ಷ ಎಂ ಎಂ ಗುರುಬಸವರಾಜ ಮಕ್ಕಳಿಗೆ ನೈತಿಕತೆ ಸಾಂಸ್ಕೃತಿಕ ವಾತಾವರಣ ಶಾಲೆಯಲ್ಲಿ ಕಲ್ಪಿಸಬೇಕು ಎಂದರು.ನಿಕಟ ಪೂರ್ವ ಸಿ ಆರ್ ಪಿ ಚನ್ನವೀರನ ಗೌಡ, ಸಿ ಆರ್ ಪಿ ವೀರೇಶ್ ಬಿ, ಬಿ ಆರ್ ಪಿ ಬಸವರಾಜ ಕೆ, ಗೌಡರ ಹೊನ್ನಪ್ಪ ಎಂ ಸರೋಜಮ್ಮ, ಕೊಟ್ರೇಶ್,ಎಂ ಎಂ ಸುನಂದಾ ಇತರರು ಉಪಸ್ಥಿತರಿದ್ದರು.ಪಟ್ಟಣದ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರಾಥಮಿಕ ಶಾಲಾ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 