ಮುಂಗಾರು ಪೂರ್ವ ಮಳೆ ಆರಂಭ: ರೈತರಿಂದ ಬಿತ್ತನೆಗೆ ಭರದ ಸಿದ್ಧತೆ
Pre-monsoon rains begin: Farmers prepare in full swing for sowing
ಲೋಕದರ್ಶನ ವರದಿ
ಮಾಂಜರಿ 23: ತಾಲೂಕಿನಾದ್ಯಂತ ಮುಂಗಾರು ಪೂರ್ವ ಮಳೆ ಆರಂಭವಾಗಿರುವುದರಿಂದ ರೈತರು ಮುಂಗಾರು ಬಿತ್ತನೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಭೂಮಿ ಹದಗೊಳಿಸುವ ಜೊತೆಗೆ ಕೃಷಿ ಪರಿಕರಗಳ ದುರಸ್ತಿ ಹಾಗೂ ಸ್ವಚ್ಛತೆಯಲ್ಲಿ ನಿರತರಾಗಿದ್ದಾರೆ. ರೈತರ ನಂಬಿಗಸ್ತ ಮಳೆ ರೋಹಿಣಿ ಮೇ 25 ರಿಂದ ಪ್ರಾರಂಭವಾಗುತ್ತಿದ್ದು, ಈ ರೋಹಿಣಿ ಮಳೆ ಕೈ ಹಿಡಿದರೆ ಬದುಕು ಬಂಗಾರವಾಗುತ್ತದೆ ಎಂಬ ಆಸೆಯಿಂದ ರೈತ ಕುಳಿತ್ತಿದ್ದು, ಪ್ರತಿ ಬಾರಿಯೂ ಮಳೆಗಾಗಿ ಕಾಯುವ ರೈತರು ಬಿತ್ತನೆ ಬೀಜವನ್ನಿಟ್ಟುಕೊಂಡು ಆಕಾಶದತ್ತ ಮುಖ ಮಾಡಿರುವುದು ಸರ್ವೇ ಸಾಮಾನ್ಯ.
ರೈತರು ಬಿತ್ತನೆಗೆ ಬೇಕಾದ ಕುಂಟೆ, ಪಲಗಾ, ಕೂರಿಗೆ, ನೊಗ, ಬುಕ್ಕಾ ಸಿದ್ಧತೆಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಡಿಗೇರ ಹಾಗೂ ಕಮ್ಮಾರರ ಬಳಿ ತಮ್ಮ ಪರಿಕರಗಳ ದುರಸ್ಥಿ ಮಾಡಿಸಿಕೊಂಡು ಬಿತ್ತನೆಗೆ ಸಿದ್ಧವಾಗಿದ್ದಾರೆ. ಕೆಲವು ಭಾಗ ಕೃಷ್ಣಾ ನದಿಯ ನೀರನ್ನು ಅವಲಂಬಿಸಿದರೆ ಕೆಲವು ಭಾಗ ಮಳೆ ಹಾಗೂ ಘಟಪ್ರಭಾ ಎಡದಂಡೆ ಕಾಲುವೆಯನ್ನು ಅವಲಂಬಿಸಿದ್ದಾರಮುಂಗಾರು ಬೆಳೆಗಳಾದ ದ್ವಿದಳ ದಾನ್ಯಗಳಾದ ಸೋಯಾಬೀನ್, ಬೆಳೆ, ಉದ್ದು, ಹೆಸರು, ಮಡಿಕೆಕಾಳು ಸೇರಿದಂತೆ ವಿವಿಧ ಬೆಳೆಗಳ ಜೊತೆ ವಾಣಿಜ್ಯ ಬೆಳೆಗಳಾದ ಕಬ್ಬು ಹಾಗೂ ಅರಿಶಿಣ ಬಿತ್ತನೆ ಮಾಡಲು ರೈತರು ಚಟುವಟಿಕೆ ಪ್ರಾರಂಭಿಸಿದ್ದಾರೆ.
ಬಿತ್ತನೆ ಗುರಿ: ಚಿಕ್ಕೋಡಿ ತಾಲೂಕಿನಲ್ಲಿ ಈ ಬಾರಿ ಮುಂಗಾರು ಹಂಗಾಮಿಗೆ ಗೋವಿನ ಜೋಳ 8900 ಹೆಕ್ಟೇರ್ ಪ್ರದೇಶ, ತೊಗರಿ 1000 ಹೆಕ್ಟೇರ್ ಪ್ರದೇಶ, ಹುರುಳಿ 10 ಹೆಕ್ಟೇರ್, ಹೆಸರು 800 ಹೆಕ್ಟೇರ್, ಉದ್ದು 300 ಹೆಕ್ಟೇರ್, ಅವರೆ 20 ಹೆಕ್ಟೇರ್, ಶೇಂಗಾ 100 ಹೆಕ್ಟೇರ್, ಸೂರ್ಯಕಾಂತಿ 500 ಹೆಕ್ಟೇರ್, ಸೋಯಾಬೀನ್ 200 ಹೆಕ್ಟೇರ್, ಕಬ್ಬು ಪಿ 3750 ಹೆಕ್ಟೇರ್, ಕಬ್ಬು ಹೆಚ್ 12500 ಹೆಕ್ಟೇರ್, ಒಟ್ಟು 28080 ಹೆಕ್ಟೇರ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 