ಕನಕದಾಸರ ಜಯಂತಿ ನಿಮಿತ್ಯ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ
ಲೋಕದರ್ಶನ ವರದಿ
ರಾಯಬಾಗ 08: ನ.15 ರಂದು ನಡೆಯಲಿರುವ ವಿಶ್ವಚೇತನ ಸಂತಶ್ರೀ ಕನಕದಾಸರ 532ನೇ ಜಯಂತಿ ಉತ್ಸವವನ್ನು ತಾಲೂಕಾ ಆಡಳಿತ ಹಾಗೂ ಸಮಾಜದ ಸಂಘಟನೆಗಳೊಂದಿಗೆ ವಿಜ್ರಂಭಣೆಯಿಂದ ಆಚರಿಸಲು ತಹಶೀಲ್ದಾರ ಡಿ.ಎಚ್.ಕೋಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಇತ್ತಿಚೆಗೆ ಪಟ್ಟಣದ ಮಿನಿವಿಧಾನ ಸೌಧದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ತಹಶೀಲ್ದಾರರವರು, ನ.15 ರಂದು ಬೆಳೆಗ್ಗೆ 9 ಗಂಟೆಗೆ ವಿವಿಧ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಭವ್ಯಮೆರವಣೆಗೆ ನಡೆಯಲಿದೆ. 10 ಗಂಟೆಗೆ ವೇದಿಕೆಯ ಕಾರ್ಯಕ್ರಮ ಜರುಗಲಿದೆ ಮತ್ತು ಕನಕದಾಸರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಕೂಡಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕುರುಬ ಸಮಾಜದ ಮುಖಂಡ ಹಾಲಪ್ಪ ಘಾಳಿ, ಅಣ್ಣಪ್ಪ ಘಂಟಿ, ತಾಲೂಕಾ ಕುರುಬರ ಸಂಘದ ಅಧ್ಯಕ್ಷ ಶಿವಪುತ್ರ ಹಾಡಕರ, ಕಾರ್ಯದರ್ಶಿ ಲಖನ ಕಟ್ಟಿಕಾರ, ಮಹಾದೇವ ಶಿರಗೂರೆ, ಏಕನಾಥ ಮಾಚಕನೂರ, ಸಿದ್ದು ಪೂಜಾರಿ, ಗೋಪಾಲ ಕೊಚೇರಿ, ಕಲ್ಲಪ್ಪ ಹಾರೂಗೇರಿ, ಲಕ್ಷ್ಮಣ ನಾಯಿಕ, ಪಿ.ಎಸ್.ಪತ್ತಾರ, ಆರ್.ಎಸ್.ಪಾಟೀಲ, ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 