ಕೇಂದ್ರ ಆರೋಗ್ಯ ಸಚಿವರಿಂದ ಕಾಯಕಲ್ಪ ಪ್ರಶಸ್ತಿ ಪ್ರದಾನ
ನವದೆಹಲಿ, ಅ 12: ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದಲ್ಲಿ ಉನ್ನತ ಗುಣಮಟ್ಟ ಕಾಯ್ದುಕೊಂಡ ವಿವಿಧ ಕೇಂದ್ರ ಸರ್ಕಾರಿ ಸಂಸ್ಥೆಗಳು, ಜಿಲ್ಲಾ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಶುಕ್ರವಾರ ಕಾಯಕಲ್ಪ ಪ್ರಶಸ್ತಿ ಪ್ರದಾನ ಮಾಡಿದರು. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನನಗಳ ಸಂಸ್ಥೆ (ಏಮ್ಸ್) ಮೂರು ಕೋಟಿ ರೂ ನಗದು ಬಹುಮಾನ ಪಡೆದಿದೆ. ಪುದುಚೆರಿಯ ಜವಾಹರ್ ಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಒಂದೂವರೆ ಕೋಟಿ ರೂ ನಗದು ಬಹುಮಾನ ಪಡೆದಿದೆ. ಅಲ್ಲದೇ ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಮತ್ತು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆ, ಭುವನೇಶ್ವರ ಏಮ್ಸ್ ಆಸ್ಪತ್ರೆಗಳಿಗೂ ಗುಣಮಟ್ಟದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿದುದಾಗಿ ಪುರಸ್ಕರಿಸಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 