ರಾಜ್ಯಪಾಲರುಗಳ ಜೊತೆ ರಾಷ್ಟ್ರಪತಿ, ಉಪರಾಷ್ಟಪತಿ ವಿಡಿಯೋ ಕಾನ್ಫರೆನ್ಸ್
ನವದೆಹಲಿ, ಏ ೩, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶುಕ್ರವಾರ ಹಲವು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು, ಉಪ ರಾಜ್ಯಪಾಲರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ದೇಶಾದ್ಯಂತ ಸೃಷ್ಟಿಯಾಗಿರುವ ಕೋವಿಡ್ -೧೯ ಸೋಂಕು ಪರಿಸ್ಥಿತಿಯನ್ನು ಸಮೀಕ್ಷಿಸಿದರು. ಈ ಕಾರ್ಯಕ್ರಮದಲ್ಲಿ ಆಯಾ ರಾಜ್ಯಗಳ ಉನ್ನತ ಅಧಿಕಾರಿಗಳು ಕೂಡಾ ಪಾಲ್ಗೊಂಡಿದ್ದರು.ರಾಷ್ಟ್ರಪತಿ, ಉಪ ರಾಷ್ಟ್ರಪತಿ ಒಂದು ವಾರದಲ್ಲಿ ಎರಡನೇ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಪಾಲರುಗಳೊಂದಿಗೆ ಸಂವಾದ ನಡೆಸಿದ್ದರು.
ಮಾರ್ಚ್ ೨೭ ರಂದು ೧೪ ರಾಜ್ಯಗಳ ರಾಜ್ಯಪಾಲರೊಂದಿಗೆ ಮೊದಲ ವಿಡಿಯೋ ಸಮ್ಮೇಳನ ನಡೆಸಿದ್ದರು. ಅದರಲ್ಲಿ ಕೇಂದ್ರಾಡಳಿ ಪ್ರದೇಶಗಳ ಉಪ ರಾಜ್ಯಪಾಲರು ಭಾಗಿಯಾಗಿದ್ದರು. ಉಳಿದ ರಾಜ್ಯಪಾಲರು, ಉಪ ರಾಜ್ಯಪಾಲರೊಂದಿಗೆ ರಾಷ್ಟ್ರಪತಿ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಆಯಾ ರಾಜ್ಯಗಳಲ್ಲಿನ ಕೋವಿಡ್ -೧೯ ಪರಿಸ್ಥಿತಿಯ ಬಗ್ಗೆ ಈ ಸಂದರ್ಭದಲ್ಲಿ ಪ್ರಮುಖವಾಗಿ ಚರ್ಚೆ ನಡೆಸಿದರು. ಕೊರೊನಾ ವೈರಸ್ ಹಬ್ಬುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರವಲ್ಲದೆ, ರೆಡ್ ಕ್ರಾಸ್ ಸೊಸೈಟಿ, ನಾಗರಿಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಖಾಸಗಿ ವಲಯ ವಹಿಸಬೇಕಾದ ಪಾತ್ರದ ಬಗ್ಗೆ ರಾಷ್ಟ್ರಪತಿ ಚರ್ಚಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 