ಫಿಲಿಪ್ಪೀನ್ಸ್, ಜಪಾನ್ ಪ್ರವಾಸ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್
ನವದೆಹಲಿ, ಅ 17 ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಂದು ವಾರ ಫಿಲಿಪ್ಪೀನ್ಸ್ ಮತ್ತು ಜಪಾನ್ ಪ್ರವಾಸಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕೋವಿಂದ್ ಅವರು ಜಪಾನ್ ದೊರೆ ನರುಹಿತೋ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಫಿಲಿಪ್ಪೀನ್ಸ್ ಅಧ್ಯಕ್ಷ ರೋಡ್ರಿಗೋ ರೋಆ ಡುಟೆರ್ಟ್ ಆಹ್ವಾನದ ಮೇರೆಗೆ ಕೋವಿಂದ್ ಫಿಲಿಪ್ಪೀನ್ಸ್ ಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಉಭಯ ರಾಷ್ಟ್ರಗಳ ನಡುವಣ 70 ವರ್ಷಗಳ ರಾಜತಾಂತ್ರಿಕ ಸಂಬಂಧದ ಸ್ಮರಣಾರ್ಥ ಈ ಭೇಟಿ ನಡೆಯಲಿದ್ದು ಮನಿಲಾದಲ್ಲಿ ಕೋವಿಂದ್ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ, ಅಲ್ಲದೇ ಸಮುದಾಯ ಚಟುವಟಿಕೆಗಳಲ್ಲೂ ಭಾಗಿಯಾಗಲಿದ್ದಾರೆ. ಪ್ರವಾಸದ ಎರಡನೇ ಚರಣದಲ್ಲಿ ಅವರು ಅ 21 ರಂದು ಜಪಾನ್ ಗೆ ಭೇಟಿ ನೀಡಲಿದ್ದು ಜಪಾನ್ ದೊರೆಯ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಏರ್ಪಡಿಸಿರುವ ಔತಣ ಕೂಟದಲ್ಲೂ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಬೌದ್ಧ ದೇವಾಲಯಕ್ಕೆ ಭೇಟಿ ನೀಡಿ ಗಯಾದಲ್ಲಿನ ಪವಿತ್ರ ಬೋಧಿ ವೃಕ್ಷದ ಸಸ್ಯವನ್ನೂ ಕೂಡ ನೆಡಲಿದ್ದಾರೆ. ಈ ಮೂಲಕ ಬೌದ್ಧ ಧರ್ಮದ ನೆಲೆಯಲ್ಲಿ ಭಾರತ ಮತ್ತು ಜಪಾನ್ ನಡುವಣ ಐತಿಹಾಸಿಕ ಮತ್ತು ಸಾಂಸ್ಕೃತಿಕ ಬಂಧಗಳ ಮೇಲೆ ಬೆಳಕು ಚೆಲ್ಲಲಿದ್ದಾರೆ. ಉಭಯ ದೇಶಗಳ ನಡುವಣ ಸಾಂಪ್ರದಾಯಿಕ ಸ್ನೇಹ ಮತ್ತು ಬಾಂಧವ್ಯದ ಆಧಾರದ ಮೇಲಿನ ದ್ವಿಪಕ್ಷೀಯ ಸಹಕಾರವನ್ನು ಬಲಗೊಳಿಸುವ ಭಾರತದ ಬದ್ಧತೆಯನ್ನು ಈ ಭೇಟಿ ಪುನಃ ಎತ್ತಿ ಹಿಡಿಯಲಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 