ತಿರುನಲ್ಲಾರ್ ಶನೈಶ್ಚರ ದೇಗುಲಕ್ಕೆ ರಾಷ್ಟ್ರಪತಿ ಭೇಟಿ
ಪುದುಚೇರಿ, ಡಿ 24,ರಾಷ್ಟ್ರಪತಿ
ರಾಮನಾಥ್ ಕೋವಿಂದ್ ಅವರು ಮಂಗಳವಾರ ಬೆಳಿಗ್ಗೆ ಪುದುಚೇರಿಯ ರಾಜ್ ನಿವಾಸ್ನಿಂದ ಕಾರೈಕಲ್ಗೆ ತೆರಳಿದರು. ಕಾರೈಕಲ್ ಗೆ ತೆರಳಲು ಪುದುಚೇರಿ ವಿಮಾನ ನಿಲ್ದಾಣಕ್ಕೆ ಅವರು
ಆಗಮಿಸಿದ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ಮುಖ್ಯಮಂತ್ರಿ ವಿ ನಾರಾಯಣಸಾಮಿ, ಅವರ
ಕ್ಯಾಬಿನೆಟ್ ಸಹೋದ್ಯೋಗಿಗಳು ಮತ್ತು ಪ್ರಾದೇಶಿಕ ಆಡಳಿತದ ಹಿರಿಯ ಅಧಿಕಾರಿಗಳು ಹಾಜರಿದ್ದರು. ಚೆನ್ನೈ ಮಾರ್ಗವಾಗಿ ದೆಹಲಿಗೆ ತೆರಳುವ ಮುನ್ನ, ರಾಷ್ಟ್ರಪತಿಯವರು
ಇಂದು ತಿರುನಲ್ಲಾರ್ ಶನೈಶ್ಚರ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ರಾಷ್ಟ್ರಪತಿಯವರು
ಸೋಮವಾರ ಪಾಂಡಿಚೆರಿ ವಿಶ್ವವಿದ್ಯಾಲಯದಲ್ಲಿ ಸಮಾವೇಶ ಭಾಷಣ ಮಾಡಿದರು. ಅರೋವಿಲ್ಲೆ ಮತ್ತು ಅರಬಿಂದೋ ಆಶ್ರಮಕ್ಕೆ ಭೇಟಿ ನೀಡಿದ ಅವರು,
ರಾತ್ರಿ ರಾಜ್ ನಿವಾಸ್ನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ
ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 