ಅನ್ನದಾನೀಶ್ವರ ಮಠದಲ್ಲಿ ಜುಲೈ 22ರಂದು ಪತ್ರಿಕಾ ದಿನಾಚರಣೆ
Press Day celebrated on July 22 at Annadanishwara Mutt
ಕುಕನೂರು 21: ಪಟ್ಟಣದ ಅನ್ನದಾನೀಶ್ವರ ಶಾಖಾ ಮಠದಲ್ಲಿ ಜುಲೈ 22ರ ಮಂಗಳವಾರ ಬೆಳಗ್ಗೆ 10 30 ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ನಾಗರಾಜ ಬೆಣಕಲ್ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಸಿಎಂ ಆರ್ಥಿಕ ಸಲಹೆಗಾರ ಬಸವರಾಜರಾಯ ರೆಡ್ಡಿ ಉದ್ಘಾಟಿಸಲಿದ್ದು, ಡಿ ವಿ ಜಿ ಭಾವಚಿತ್ರಕ್ಕೆ ಸಂಸದ ರಾಜಶೇಖರ ಹಿಟ್ನಾಳ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಮಾಜಿ ಸಚಿವ ಹಾಲಪ್ಪಆಚಾರ ಘನ ಉಪಸ್ಥಿತಿ ವಹಿಸಲಿದ್ದಾರೆ ಸ್ಥಳೀಯ ಮಠದ ಮಹಾದೇವ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.ಸಂಘದ ಜಿಲ್ಲಾ ಅಧ್ಯಕ್ಷ ಹನುಮಂತ ಹಳ್ಳಿಕೇರಿ, ಹೆಚ್ಎಸ್ ಹರೀಶರಾಜ್ಯ ಸಮಿತಿ ಸದಸ್ಯರು, ನಾಗರಾಜ್ ವೈ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ರವರಿಗೆ ಆಹ್ವಾನ ಆಮಂತ್ರಣ ನೀಡಿ ಮಾತನಾಡಿ ಸಂಘದ ಜಿಲ್ಲಾ ಪದಾಧಿಕಾರಿಗಳು, ಗಣ್ಯರು, ಅಧಿಕಾರಿ ವರ್ಗದವರು, ತಾಲೂಕ ಸಂಘದ ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಪತ್ರಿಕಾ ದಿನಾಚರಣೆ ಪ್ರಯುಕ್ತ ಪಟ್ಟಣದ ಪ್ರೌಢ ಶಾಲೆ ಮಕ್ಕಳಿಗೆ ಜುಲೈ 22 ಮಂಗಳವಾರ ಬೆಳಗ್ಗೆ 9 ಗಂಟೆಗೆ "ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಪೂರಕವೋ ಮಾರಕವೋ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಜರುಗಲಿದೆ. ಸ್ಪರ್ಧೆ ವಿಜೇತರಿಗೆ ಆಕರ್ಷಕ ಬಹುಮಾನ ವಿತರಿಸಲಾಗುತ್ತಿದೆ. ಪತ್ರಕರ್ತ ಮುರಾರಿ ಭಜಂತ್ರಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 