ವಿಜ್ಞಾನ ಕಲಿಕೆಗೆ ಆದ್ಯತೆ ನೀಡಿ- ಎಸ್ ಎಸ್ ಪಾಟೀಲ್
Prioritize learning science - SS Patil
ವಿಜ್ಞಾನ ಕಲಿಕೆಗೆ ಆದ್ಯತೆ ನೀಡಿ- ಎಸ್ ಎಸ್ ಪಾಟೀಲ್
ಹೂವಿನ ಹಡಗಲಿ 14: ಮೂಲಭೂತ ವಿಜ್ಞಾನ ಕಲಿಕೆಗೆ ಆದ್ಯತೆ ನೀಡಿರಿ ಎಂದು ಪ್ರಾಚಾರ್ಯರಾದ ಪ್ರೊ ಎಸ್ ಎಸ್ ಪಾಟೀಲ್ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಜಿ ಬಿ ಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಮಂಗಳವಾರ ಪ್ರಥಮ ಬಿ ಎಸ್ ಸಿ ಹಾಗೂ ಬಿ ಸಿ ಎ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಪರಿಚಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಓದಿಗೆ ಸೀಮಿತರಾಗದೆ ಹೊಸ ವಿಜ್ಞಾನದ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಿರಿ ಎಂದು ಹೇಳಿದರು.ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ರೆಡ್ಡಿ ಮಾತನಾಡಿದರು.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಸುರೇಶ ಅಂಗಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಜ್ಞಾನಿಗಳ ಸಂಶೋಧನೆ ಬದುಕು ಆದರ್ಶ ಆಗಬೇಕು. ಮೇಡಂ ಕ್ಯೂರಿ ಐಸಾಕ್ ನ್ಯೂಟನ್ ಆಲ್ಫ್ರಡ್ ನೊಬೆಲ್ ಸಿ ವಿ ರಾಮನ್ ಎಡಿಸನ್ ಶ್ರೇಷ್ಠ ವಿಜ್ಞಾನಿಗಳು ಜನ ಸಾಮಾನ್ಯರ ಒಳಿತಿಗಾಗಿ ಸಂಶೋಧನೆ ಮಾಡಿದ್ದಾರೆ ಎಂದು ತಿಳಿಸಿದರು .ಉಪನ್ಯಾಸಕ ಚಂದ್ರಬಾಬು, ಬಿ ಸಿ ಎ ವಿಭಾಗದ ಮಹಿಮಾ ಜ್ಯೋತಿ.ಅಕ್ಷತಾ ಮಾತನಾಡಿದರು. ಉಪನ್ಯಾಸಕರಾದ ಸಂದೀಪ್, ಹರ್ಷ ಕೆ ಎಂ, ಕುಸುಮ ಶ್ವೇತಾ ಮಹೇಶ್, ಚಂದನ, ಅಂದವ್ವ ಇತರರು ಇದ್ದರು.ಅನುಷಾ, ನಂದೀಶ್, ರೋಹಿತ್ ಕುಮಾರ್, ಅಕ್ಷತಾ ಕೆ ಎಸ್ ನಿರ್ವಹಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 