ಬಜೆಟ್ ನಲ್ಲಿ ಸಣ್ಣ ಕೈಗಾರಿಕೆಗಳಿಗೆ ಆದ್ಯತೆ ನೀಡಿ: ಮುಖ್ಯಮಂತ್ರಿಗೆ ಕಾಸಿಯಾ ಮನವಿ
ಬೆಂಗಳೂರು, ಫೆ 10, ಮಾರ್ಚ್ 5 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸುತ್ತಿರುವ ರಾಜ್ಯ ಬಜೆಟ್ ನಲ್ಲಿ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘ ಕಾಸಿಯಾ ಒತ್ತಾಯಿಸಿದೆ. ನಗರದಲ್ಲಿಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಘದ ಅಧ್ಯಕ್ಷ ಆರ್. ರಾಜು ನೇತೃತ್ವದ ನಿಯೋಗ, ಸಣ್ಣ ಕೈಗಾರಿಕೆಗಳು ಸಂಕಷ್ಟದಲ್ಲಿದ್ದು ಈ ವಲಯಕ್ಕೆ ಹೆಚ್ಚು ಸಬ್ಸಿಡಿ, ಸವಲತ್ತುಗಳನ್ನು ಕಲ್ಪಿಸುವಂತೆ ಕೋರಿತು.
ಕಾಸಿಯಾಗೆ ಕೆಐಎಡಿಬಿ, ಕೆ.ಎಸ್.ಎಫ್.ಸಿ ಮತ್ತು ಕೆ.ಎಸ್.ಪಿ.ಸಿ.ಬಿ. ಮಂಡಳಿಗಳಲ್ಲಿ ಪ್ರಾತಿನಿಧ್ಯ ನೀಡಬೇಕು. ಕೈಗಾರಿಕೆಗಳಿಗೆ ಅನುಮೋದನೆ ನೀಡುವ ರಾಜ್ಯ ಮಟ್ಟದ ಸಮಿತಿಯಲ್ಲಿ ಕಾಸಿಯಾ ಸಂಸ್ಥೆಗೆ ವಿಷೇಶ ಆಹ್ವಾನಿತರ ಪ್ರಾತಿನಿಧ್ಯ ಕೊಡಬೇಕು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ವಿದ್ಯುತ್ ಕಡಿತದ ಆದೇಶದಿಂದ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಮನವಿ ಮಾಡಿದೆ.
ವಿದ್ಯುತ್, ನೀರು ಸಂಪರ್ಕ ಪಡೆಯಲು ಇರುವ ತೊಡಕುಗಳನ್ನು ನಿವಾರಿಸಬೇಕು. ಕೈಗಾರಿಕಾ ಪ್ರದೇಶಗಳಲ್ಲಿ ರಿಯಾಯಿತಿ ದರದಲ್ಲಿ ಭೂದರ ನಿಗದಿ ಮಾಡಬೇಕು. 2019 -24 ರ ಅವಧಿಗೆ ಹೊಸ ಜವಳಿ ಮತ್ತು ಉಡುಪು ನೀತಿ ಜಾರಿಗೆ ತರಬೇಕು ಎಂದು ಕೋರಿದೆ. ಸೂಕ್ಷ್ಮ ಮತ್ತು ಎಸ್ಎಸ್ಐಗಳಿಗೆ ಬೆಂಬಲ ನೀಡಲು ಆರ್ಥಿಕ ಪ್ರೋತ್ಸಾಹಧನ ಒದಗಿಸಬೇಕು. ಸೂಕ್ಷ್ಮ ಸಣ್ಣ ಉದ್ಯಮಗಳ ಸೌಲಭ್ಯ ಮಂಡಳಿ (ಎಂಎಸ್ಇಎಫ್ಸಿ) ರಚಿಸಬೇಕು. ಕೈಗಾರಿಕಾ ಮೂಲಸೌಕರ್ಯಾಭಿವೃದ್ದಿ ಮತ್ತು ರಫ್ತು ಚಟುವಟಿಕೆಗಳಿಗೆ ನೆರವು ಕಲ್ಪಿಸಬೇಕು. ಜಿಲ್ಲೆಗಳ ಖಾಸಗಿ ಕೈಗಾರಿಕಾ ಪ್ರದೇಶಗಳಲ್ಲಿ ಎಸ್ಎಂಇಗಳ ಅಭಿವೃದ್ಧಿಗಾಗಿ ಮೂಲಸೌಕರ್ಯಾಭಿವೃದ್ಧಿ ಉನ್ನತೀಕರಣಕ್ಕೆ ನಿಧಿ, ಪ್ರಮುಖ ಕೈಗಾರಿಕಾ ಪ್ರದೇಶಗಳು ಮತ್ತು ಎಸ್ಟೇಟ್ಗಳಲ್ಲಿ ಕೈಗಾರಿಕಾ ನಗರ ಪ್ರಾಧಿಕಾರ ರಚನೆ, ಹೊಸ ಕೈಗಾರಿಕಾ ಪ್ರದೇಶಗಳ ಸೃಷ್ಟಿಗೆ ಒತ್ತು ನೀಡಬೇಕು ಎಂದು ಹೇಳಿದರು.
ಖಾಸಗಿ ಬಂಡವಾಳ ಹೂಡಿಕೆದಾರರು ಅಥವಾ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಡಿ ಕೈಗಾರಿಕಾ ಪ್ರದೇಶಗಳು ಮತ್ತು ವಸಾಹತುಗಳ ಸ್ಥಾಪನೆ, ಕೆಎಸ್ಪಿಸಿಬಿಯಿಂದ ಸಿಇಟಿಪಿಗಳ ಸ್ಥಾಪನೆ, ಭೂಮಿ ಪರಿವರ್ತನೆ ಮತ್ತು ಆರ್.ಡಿ.ಪಿ.ಆರ್. ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಮನವಿ ಮಾಡಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 