ಇನ್ನಿಂಗ್ಸ್ ಆರಂಭಿಸಲಿರುವ ಪೃಥ್ವಿ-ಮಯಾಂಕ್, ಐದನೇ ಸ್ಥಾನದಲ್ಲಿ ಕೆ.ಎಲ್
ನವದೆಹಲಿ, ಫೆ.4- ಉಪನಾಯಕ ರೋಹಿತ್ ಶರ್ಮಾ ಗಾಯದಿಂದ ಬಳಲಿದ್ದು, ಕಿವೀಸ್ ಸರಣಿಯಿಂದ ಹೊರಗುಳಿದಿದ್ದಾರೆ. ಟಿ-20 ಸರಣಿ ಕ್ಲೀನ್ ಸ್ವೀಪ್ ಮಾಡಿರುವ ಟೀಮ್ ಇಂಡಿಯಾ ಮತ್ತೊಂದು ಮೈಲುಗಲ್ಲಿನ ನಿರೀಕ್ಷೆಯಲ್ಲಿದೆ.
ಗಾಯದಿಂದಾಗಿ ರೋಹಿತ್ ಏಕದಿನ ಮತ್ತು ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಹ್ಯಾಮಿಲ್ಟನ್ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಪೃಥ್ವಿ ಶಾ ಮತ್ತು ಮಾಯಾಂಕ್ ಅಗರ್ ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ರಾಹುಲ್ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬ ಬಲ್ಲರು.
ಗಾಯಗೊಂಡ ರೋಹಿತ್ ಬದಲಿಗೆ ಮಯಾಂಕ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಶಾ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಗಾಯಗೊಂಡ ಶಿಖರ್ ಧವನ್ ಬದಲಿಗೆ ಪೃಥ್ವಿ ತಂಡ ಸೇರಿದ್ದರು. ರೋಹಿತ್ ಮತ್ತು ಶಿಖರ್ ಇಬ್ಬರೂ ಏಕದಿನ ತಂಡದಿಂದ ಹೊರ ನಡೆದ ಬಳಿಕ ಮತ್ತೊಂದು ಹೊಸ ಆರಂಭಿಕ ಜೋಡಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಲಿದೆ.
"ಪೃಥ್ವಿ ತಂಡದಲ್ಲಿದ್ದಾರೆ ಮತ್ತು ರೋಹಿತ್ ಬದಲಿಗೆ ಮಾಯಾಂಕ್ ಸ್ಥಾನ ಪಡೆದಿದ್ದಾರೆ. ಏಕದಿನ ಪಂದ್ಯದಲ್ಲಿ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದು, ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ” ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 