ಮಿರ್ಜಾಪುರ ವಿಂಧ್ಯವಾಸಿನಿಗೆ ಪ್ರಿಯಾಂಕಾ ನಮನ
ಮಿರ್ಜಾಪುರ, ಮಾ 19: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ಉದ್ದೇಶ ಹೊಂದಿರುವ ಪೂರ್ವ ಉತ್ತರಪ್ರದೇಶದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಗಂಗಾ ಯಾತ್ರೆ’ ಮುಂದುವರಿಸಿದ್ದು, ಮಂಗಳವಾರ ಮಿರ್ಜಾಪುರ ತಲುಪಿದರು.
ರಸ್ತೆ ಮಾರ್ಗವಾಗಿ ವಿಂಧ್ಯವಾಸಿನಿ ದೇವಾಲಯ ತಲುಪಿದ ಅವರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಂತಿ ಶರೀಫ್ ದರ್ಗಾಕ್ಕೆ ಭೇಟಿ ನೀಡಿದರು. ಸುಮಾರು 5 ಗಂಟೆ ತಡವಾಗಿ ತಲುಪಿದ್ದರಿಂದ ಈ ಮೊದಲೇ ಯೋಜಿಸಿದ್ದ ವಿಶ್ವವಿಖ್ಯಾತ ತ್ರಿಕೋನ ಪರಿಕ್ರಮ ಕೈಬಿಡಲಾಯಿತು.
ಪ್ರಿಯಾಂಕಾ ಭೇಟಿ ಹಿನ್ನೆಲೆಯಲ್ಲಿ ವಿಂಧ್ಯವಾಸಿನಿ ದೇವಾಲಯಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಾಬಲ್ಯವಿರುವೆಡೆ ಗಂಗಾ ಯಾತ್ರೆ ಕೈಗೊಂಡಿರುವ ಪ್ರಿಯಾಂಕಾ, ಪ್ರಯಾಗ್ ರಾಜ್ ನಿಂದ ವಾರಾಣಸಿಗೆ ಗಂಗಾ ನದಿ ಮಾರ್ಗವಾಗಿ ಭೇಟಿ ನೀಡಲಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 