ಅಕ್ರಮ ಮದ್ಯ ಮಾರಾಟ ನಿಷೇದಕ್ಕೆ ಆಗ್ರಹ
ಲೋಕದರ್ಶನ ವರದಿ
ಕೊಪ್ಪಳ 02: ತಾಲೂಕಿನ ಗಿಣಿಗೇರಿ ಹತ್ತಿರ ಇರುವ ಹೊಸಕನಕಾಪುರ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ವ್ಯಾಪಕವಾಗಿ ನಡೆಯತ್ತಿದ್ದು ಶೀಘ್ರ ನಿಲುಗಡೆಗೊಳಿಸಬೇಕೆಂದು ಗ್ರಾಮದ ಮಹಿಳೆಯರು ಮತ್ತು ಯುವಕರು ಸ್ವಯಂ ಪ್ರೇರಿತರಾಗಿ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಮಾರಾಟಗಾರರ ವಿರುದ್ಧ ದೂರು ನೀಡಿದರು. ತದನಂತರ ಸಂಬಂಧಿಸಿದ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೂ ಮನವಿ ಸಲ್ಲಿಸಿ ತಕ್ಷಣೆವೆ ಗ್ರಾಮದಲ್ಲಿ ಸಂಪೂರ್ಣ ಮದ್ಯಪಾನ ನಿಲುಗಡೆಗೊಳಿಸದಿದ್ದರೆ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಈ ವೇಳೆ ಪ್ರಗತಿಪರ ಹೋರಾಟಗಾರ ಬಸವರಾಜ ಶೀಲವಂತರ, ರಾಮಣ್ಣ ಬಿ ಶೆಟ್ಟಿ, ಬಸವರಾಜ ಅಗಸರ, ಮಂಜುನಾಥ ಕಂಪಸಾಗರ, ನಾಗರಾಜ ತಳವಾರ, ಆನಂದ ಮೂರಮನಿ, ತಾಜುದ್ದೀನ್ ಹೊಸಮನಿ, ಮಂಜುಳಾ, ಈರಮ್ಮ, ಗೀತಾ, ಶಾಂತಮ್ಮ, ಸಾವಿತ್ರಿ, ಶಹನಾಜ್ ಬಿ, ಪ್ರೇಮ, ಹುಚ್ಚಮ್ಮ, ಕಸ್ತೂರಿ ಸೇರಿದಂತೆ ಗ್ರಾಮದ ಇತರ ಯುವಕರು ಹಾಗೂ ಮಹಿಳೆಯರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 