ಕುಡಿಯುವ ನೀರು ಸಂರಕ್ಷಿಸಿ: ಗ್ರಾಮ ಜಾಗೃತಿ
ಲೋಕದರ್ಶನ ವರದಿ
ಹಾವೇರಿ17: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಹಾವೇರಿ ವತಿಯಿಂದ ಜನನಿ ಜಾನಪದ ಕಲಾ ತಂಡ ಯಕ್ಲಾಸಪುರ,ರಾಣೆಬೆನ್ನೂರು ಇವರಿಂದ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಗ್ರಾಮೀಣ ಭಾಗದ ಜನರಿಗೆ ಮತ್ತು ರೈತರಿಗೆ ಕುಡಿಯುವ ನೀರನ್ನು ಮಿತವಾಗಿ ಬಳಸಿ, ನೀರು ಪೊಲಾಗದಂತೆ ಸಂರಕ್ಷಿಸಿ, ಶೌಚಾಲಯ ಬಳಸಿ, ಇಂಗು ಗುಂಡಿಗಳನ್ನು ನಿಮರ್ಿಸಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸಿಕೊಳ್ಳಿ, ಜಮೀನಿನ ಸುತ್ತಲೂ ಸಸಿಗಳನ್ನು ನೆಡಿ ಎಂದು ಜಾಗೃತಿ ಮೂಡಿಸಲಾಯಿತು. ರೈತರು ತಮ್ಮ ಜಮೀನಿನಲ್ಲಿ ಬದುಗಳನ್ನು ಹಾಕಿಸಿ, ಮಣ್ಣಿನ ಸವಕಳಿಯನ್ನು ತಡೆಗಟ್ಟುವ ಕುರಿತು ಮಾಹಿತಿಯನ್ನು ನೀಡಿದರು. ಹಾಗೂ ವಿವಿಧ ಯೊ?ಜನೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕೊನೆಯಲ್ಲಿ ರೈತ ಗೀತೆ, ಸ್ವಚ್ಛತಾ ಗೀತೆ ಹೇಳಲಾಯಿತು ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಶಿವಲಿಂಗಪ್ಪ ದಾಸಣ್ಣನವರ, ರಾಮಣ್ಣ ಬಂಕಾಪುರ, ವೀರನಗೌಡ ಲೆಕ್ಕನಗೌಡ್ರ, ಪಕ್ಕೀರಪ್ಪ ರಿತ್ತಿ ಮುಂತಾದವರು ಇದ್ದರು ಹಾಗೂ ಶಾಲಾ ವಿದ್ಯಾಥರ್ಿಗಳು, ಗುರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 