ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ
Protection of cows being transported to the slaughterhouse
ಬಳ್ಳಾರಿ 27: ನಗರದಲ್ಲಿ ಕಸಾಯಿ ಖಾನೆಗೆ ಸಾಗಿಸಲು ಸಿದ್ಧವಾಗಿದ್ದ ಎನ್ನಲಾದ ಐವತ್ತಕ್ಕೂ ಹೆಚ್ಚು ಗೋವುಗಳನ್ನು ನಗರದಲ್ಲಿ ಕೌಲಬಜಾರ್ ಪೊಲೀಸರು ರಕ್ಷಣೆ ಮಾಡಿದ್ದಾರೆ.ನಗರದ ಹಳೇ ಬೈಪಾಸ್ ರಸ್ತೆಯ ಗೋಲಬಡಿ ಮಾರ್ಗದಲ್ಲಿರುವ ಕೊಟ್ಟಿಗೆಯೊಂದರಲ್ಲಿ ಗೋವುಗಳನ್ನು ಕೂಡಿಹಾಕಿ ಇರಿಸಲಾಗಿದೆ ಎಂಬ ಮಾಹಿತಿ ಮೇರೆಗೆ ಹಿಂದೂ ಸಂಘಟನೆಗಳ ಮುಖಂಡರು ಪೊಲೀಸರಿಗೆ ದೂರು ನೀಡಿದ್ದರು. ಮಾಹಿತಿ ಆಧರಿಸಿ ಕೌಲಬಜಾರ್ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಪರೀಶೀಲನೆ ನಡೆಸಿದರು.\
ಈ ವೇಳೆ ಕೊಟ್ಟಿಗೆಯಲ್ಲಿ ಐವತ್ತಕ್ಕೂ ಹೆಚ್ಚು ಗೋವುಗಳು ಪತ್ತೆಯಾಗಿದ್ದು, ಅವುಗಳನ್ನು ಏಕೆ ಸಂಗ್ರಹಿಸಿಡಲಾಗಿತ್ತು ಎಂಬುದಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದವರು ಪೊಲೀಸರಿಗೆ ಸಮರ್ಕ ಉತ್ತರ ನೀಡಿಲ್ಲ ಎನ್ನಲಾಗಿದೆ.ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸಲು ಸಂಗ್ರಹಿಸಿಡಲಾಗಿತ್ತು ಎಂದು ಹಿಂದೂ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗೋವುಗಳ ಸುರಕ್ಷತೆಗಾಗಿ ಅವುಗಳನ್ನು ಗೋಶಾಲೆಗೆ ರವಾನೆ ಮಾಡುವ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 