30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ
ಉಡುಪಿ, ಮೇ 06,ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.ಜಿಂಕೆಯು ಆಕಸ್ಮಿಕವಾಗಿ ಮುಂಜಾನೆ 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಸ್ಥಳೀಯ ವ್ಯಕ್ತಿಯೊಬ್ಬರು ಬಾವಿಗೆ ಇಳಿದು ಜಿಂಕೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ನಂತರ ಅದನ್ನು ಹೊರತೆಗೆಯಲಾಯಿತು. ಸಂಪೂರ್ಣ ರಕ್ಷಣಾ ಕಾರ್ಯಾಚರಣೆ ಸುಮಾರು 20 ನಿಮಿಷಗಳ ಕಾಲ ನಡೆಯಿತು ಎಂದು ವಲಯಾರಣ್ಯಾಧಿಕಾರಿ (ಆರ್ಎಫ್ಒ) ಪ್ರಭಾಕರ್ ಕುಲಾಲ್ ತಿಳಿಸಿದ್ದಾರೆ. “ಮೂರು ವರ್ಷದ ಗಂಡು ಜಿಂಕೆಗೆ ಯಾವುದೇ ಗಾಯಗಳಾಗಿಲ್ಲ. ಹೊರತೆಗೆದ ನಂತರ, ಅದರ ಮೇಲೆ ನೀರನ್ನು ಸಿಂಪಡಿಸಲಾಯಿತು. ಜಿಂಕೆ ಕೂಡಲೇ ಎದ್ದು ಹತ್ತಿರದ ಕಾಡಿಗೆ ಓಡಿಹೋಯಿತು, ”ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 