ಒಳ ಮೀಸಲಾತಿ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾ.24ಕ್ಕೆ ಪ್ರತಿಭಟನೆ
Protest against internal reservation at Freedom Park, Bengaluru on March 24
ಹೂವಿನಹಡಗಲಿ 22: ರಾಜ್ಯ ಸರ್ಕಾರದ ಅವೈಜ್ಞಾನಿಕ ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಹಾಗೂ ಕರ್ನಾಟಕ ರಾಜ್ಯದ ಕೊಲಂಭೋ ಸಮಾಜಕ್ಕೆ ಶೇ.7 ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಂಜಾರು, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳ ಒಕ್ಕೂಟವು ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ ಎಂದು ಬಂಜಾರು ಸಮಾಜ ತಾಲೂಕು ಅದ್ಯಕ್ಷ ಶ್ರೀಧರ್ ನಾಯಕ್ ,ಕೊಟ್ರೇಶ ನಾಯಕ್ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಹಕ್ಕು, ಭಿಕ್ಷೆ ಅಲ್ಲ, ಸುಪ್ರೀಂ ಕೋರ್ಟ್ ಆದೇಶದಂತೆ ಜಾತಿ ವಾರು,ಸ್ಥಿತಿಗತಿಗಳ ಸಮೀಕ್ಷೆ ಹಾಗೂ ಗಣತಿ ನಡೆಸಬೇಕು.
ಕೊಲಂಭೋ ಸಮಾಜಕ್ಕೆ 7 ಅ ಮೀಸಲಾತಿ ನೀಡಬೇಕು ಎಂದು ಆಗ್ರಹಿಸುತ್ತೇವೆ ಎಂದ ಅವರು ಮುಂದಿನ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡುತ್ತೇವೆ ಎಂದರು. ಮಾ.24ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಗೆ ಹೂವಿನಹಡಗಲಿ ತಾಲೂಕಿನ 30 ತಾಂಡಗಳಿಂದ ಬಂಜಾರು , ಭೋವಿ,ಕೊರವ,ಕೊರಚ ಸಮಾಜದಿಂದ ಸುಮಾರು 5 ರಿಂದ 6 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದರು. ಭೋವಿ ಸಮಾಜ ತಾಲೂಕು ಅದ್ಯಕ್ಷ ಲೋಕೇಶ್, ಬಂಜಾರ. ಸಮಾಜದ ಜಯಾನಾಯ್ಕ, ಸುರೇಶ್, ಪ್ರಕಾಶ ನಾಯ್ಕ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 