ಅಪಪ್ರಚಾರ ಷಡ್ಯಂತರ ನಿಲ್ಲಿಸಲು ಆಗ್ರಹಿಸಿ ಪ್ರತಿಭಟನೆ
Protest demanding an end to the propaganda conspiracy
ತಾಳಿಕೋಟಿ 18: ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರನ್ನು ಸಾರ್ವಜನಿಕವಾಗಿ ಅಪಮಾನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಪಟ್ಟಣದ ಸರ್ವ ಸಮುದಾಯಗಳ ಸಹಯೋಗದಲ್ಲಿ ಪ್ರತಿಭಟನಾ ಮೆರವಣಿಗೆಯು ಸೋಮವಾರ ನಡೆಯಿತು.
ಪಟ್ಟಣದ ರಾಜವಾಡೆಯಿಂದ ಹೊರಟು ಬಸವೇಶ್ವರ ವೃತ್ತದವರೆಗೆ ವಿವಿಧ ಘೋಷಣೆಗಳನ್ನು ಕೂಗುತ್ತ ಸರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಣಿ ನಿರ್ಮಿಸಿದ್ದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಮಾತನಾಡಿ ಧರ್ಮಸ್ಥಳ ಕ್ಷೇತ್ರವೂ ಹಿಂದು ಸಮುದಾಯಗಳ ಶ್ರದ್ಧಾ ಕೇಂದ್ರವಾಗಿದ್ದು ಧರ್ಮಕ್ಷೇತ್ರದ ಬಗ್ಗೆ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ನಡೆಯುತ್ತಿರುವ ಅಪಪ್ರಚಾರ,ಹಿಂದೆ ಇರುವ ಷಡ್ಯಂತ್ರವನ್ನು ಬಯಲಿಗೆಳೆಯಬೇಕು. ಇದರ ಸೂಕ್ತ ತನಿಖೆಯಾಗಬೇಕು ಎಂದರು.
ಪ್ರಮುಖರಾದರ ವಿಜಯಸಿಂಗ ಹಜೇರಿ, ಸಂಗನಗೌಡ ಮ,ದರಕಲ್ಲ, ಗುಂಡುರಾವ ಧನಪಾಲ ಇತರರು ಮಾತನಾಡಿದರು. ನಂತರ ಬಸವೇಶ್ವರ ವೃತ್ತದಲ್ಲಿಯೇ ತಹಶೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಗ್ರೇಡ್ 2 ಪ್ರದೀಪ ದೇವಗಿರಿ ಅವರು ಪ್ರತಿಭಟನಾಕಾರರ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 