ಕೇರಳದ ವಯನಾಡಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹಿಸಿ ಪ್ರತಿಭಟನೆ
Protest demanding special package for Kerala's Wayanad
ನವದೆಹಲಿ 14: ಭೀಕರ ಭೂಕುಸಿತಕ್ಕೆ ತತ್ತರಿಸಿರುವ ಕೇರಳದ ವಯನಾಡು ಜಿಲ್ಲೆಯ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಸಂಸತ್ತಿನ ಆವರಣದಲ್ಲಿ ಕೇರಳದ ಸಂಸದರೊಂದಿಗೆ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಿಯಾಂಕಾ ಗಾಂಧಿ ಪ್ರತಿಭಟನೇ ನಡೆಸಿದ್ದಾರೆ.
ವಯನಾಡಿನ ವಿನಾಶವನ್ನು ಇಡೀ ದೇಶವೇ ನೋಡಿದೆ. ಹರಿಯಾಣದಲ್ಲೂ ಇದಕ್ಕೆ ಸಮಾನವಾದ ವಿಪತ್ತು ಸಂಭವಿಸಿದೆ. ರಾಜಕೀಯದಿಂದಾಗಿ ಎರಡೂ ಕಡೆಗಳಿಗೂ ಕೇಂದ್ರ ಸರ್ಕಾರವು ನೆರವು ನೀಡುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕೇರಳದ ಸಂಸದರು ಆರೋಪ ಮಾಡಿದ್ದಾರೆ. ಕೇರಳ ಭಾರತದಲ್ಲಿದೆ, 'ವಯನಾಡ್ಗೆ ನ್ಯಾಯ ದೊರಕಿಸಿ' ಎಂದು ಘೋಷಣೆಗಳನ್ನು ಕೂಗಿದ್ದಾರೆ.
ವಯನಾಡಿಗೆ ವಿಶೇಷ ಪ್ಯಾಕೇಜ್ ನೀಡಲು ಕೇಂದ್ರವು ನಿರಾಕರಿಸುತ್ತಿರುವುದು ತುಂಬಾ ನಿರಾಸೆಯನ್ನುಂಟು ಮಾಡಿದೆ. ನಾವು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದೇವೆ. ಪ್ರಧಾನ ಮಂತ್ರಿಗೂ ಪತ್ರ ಬರೆದಿದ್ದೇವೆ. ನೈಸರ್ಗಿಕ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.
ನೈಸರ್ಗಿಕ ವಿಕೋಪದ, ನೋವಿನ ಸಂದರ್ಭದಲ್ಲಿ ತಾರತಮ್ಯ ತೋರಬಾರದು. ರಾಜಕೀಯವನ್ನು ಬದಿಗಿಟ್ಟು ನೆರವನ್ನು ನೀಡಬೇಕಾದ ಸಮಯ ಇದಾಗಿದೆ. ಪ್ರಧಾನಿ ಮೋದಿ ದೇಶದ ಪ್ರತಿಯೊಬ್ಬ ನಾಗರಿಕನ ರಕ್ಷಕನಾಗಬೇಕು ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 