ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಲೋಕದರ್ಶನ ವರದಿ
ಕೊಪ್ಪಳ 14: ಜಿಲ್ಲಾ ಹಡಪದ ಸಮಾಜ ಹಾಗೂ ಕ್ಷೌರಿಕರ ಹಿತ ರಕ್ಷಣೆ ವೇದಿಕೆವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಡಿ. 16ರಂದು ಬೆಂಗಳೂರು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಹಡಪದ ಸಮಾಜ ಅಧ್ಯಕ್ಷ ಮಂಜುನಾಥ ಹಂದ್ರಾಳ ತಿಳಿಸಿದ್ದಾರೆ.
ಡಿ. 17ರಂದು ಬೆಂಗಳೂರಿನಲ್ಲಿ ಟೌನ್ಹಾಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳಾದ ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ನೀಡಬೇಕು. ಸಮಾಜ ಪ್ರವರ್ಗ2 ಎ ದಲ್ಲಿ ಬರುವದರಿಂದ ಒಳ ಮೀಸಲಾತಿ ನೀಡಬೇಕು, ಹಜಾಮಾ ಪದ ಬಳಸಿದರೆ ಜಾತಿ ನಿಂದನೆ ಪ್ರಕರಣ ದಾಖಲಿಸಲು ಕಾನೂನು ರಚಿಸಬೇಕು, ಗ್ರಾಮೀಣ ಪ್ರದೇಶದಲ್ಲಿ ಕ್ಷೌರಿಕರ ಕುಟೀರಗಳನ್ನು ನಿಮರ್ಿಸಬೇಕು, ರಾಜಕೀಯವಾಗಿ ವಂಚಿತರಾದ ಹಡಪದ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕು. ಕಾರ್ಮಿಕ ಇಲಾಖೆಯಲ್ಲಿ ಬರುವ ಎಲ್ಲಾ ಸೌಲಭ್ಯಗಳನ್ನು ಕ್ಷೌರಿಕ ವೃತ್ತಿ ಮಾಡುವವರಿಗೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕು ಎಂದು ಒತ್ತಾಯಿಸಲಾಗುವುದು.
ಡಿಸೆಂಬರ್ 16ರಂದು ಜಿಲ್ಲಾ ಹಡಪದ ಸಮಾಜ ಹಾಗೂ ಕ್ಷೌರಿಕರ ಹಿತ ರಕ್ಷಣೆ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಈ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಡಿ. 16ರಂದು ಸಮಾಜ ಬಾಂಧವರು ಕೊಪ್ಪಳ ರೇಲ್ವೆ ನಿಲ್ದಾಣಕ್ಕೆ ಸಂಜೆ 7-30ಕ್ಕೆ ಆಗಮಿಸಬೇಕು ನಂತರ ಹಂಪಿ ಎಕ್ಸ್ಪ್ರೆಸ್ ಮೂಲಕ ಬೆಂಗಳೂರು ತಲುಪಲಾಗುವುದು ಎಂದು ಹಡಪದ ಸಮಾಜದ ಮುಖಂಡರಾದ ನಿಂಗಪ್ಪ ಹಂದ್ರಾಳ, ಶರಣಪ್ಪ ದದೇಗಲ್, ಬಸಪ್ಪ ಹಲಿಗೇರಿ, ಗವಿಸಿದ್ದಪ್ಪ ಕಾಟ್ರಳ್ಳಿ, ಆನಂದ ಮಾದಿನೂರು, ರಮೇಶ ಹಿಟ್ನಾಳ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಡಪದ ಸಮಾಜ ಅಧ್ಯಕ್ಷ ಮಂಜುನಾಥ ಹಂದ್ರಾಳ ಮೊ. 7019855879 ಸಂಪಕರ್ಿಸುವಂತೆ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 