ಶಾಸಕ ಅಭಯ್ ಪಾಟೀಲ ರಾಜೀನಾಮೆಗೆ ಆಗ್ರಹಿಸಿ ಧರಣಿ
Protest demanding the resignation of MLA Abhay Patil
ಬೆಳಗಾವಿ 19: ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರ ವಿರುದ್ಧ ಕೇಳಿಬಂದಿರುವ ಆಸ್ತಿ, ಆದಾಯ, ಭೂಮಿ ಕಬಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಅವರು ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರಹವಾಸಿಗಳು ಧರಣಿ ಸತ್ಯಾಗ್ರಹ ನಡೆಸಿದರು. ಸಾಮಾಜಿಕ ಹೋರಾಟಗಾರರಾದ ರಾಜಕುಮಾರ ಟೊಪ್ಪಣ್ಣವರ ಹಾಗೂ ಸುಜೀತ್ ಮುಳಗುಂದ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವಾಗ ಎಲ್ಲರಿಗೂ ಒಂದೇ ಮಾನದಂಡ ಅನ್ವಯಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಶಾಸಕ ಅಭಯ್ ಪಾಟೀಲ ಅವರನ್ನು ಬಿಜೆಪಿ ಪಕ್ಷದಿಂದ ಹೊರಹಾಕಬೇಕು ಹಾಗೂ ಶೀಘ್ರದಲ್ಲೇ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಪಾದಯಾತ್ರೆ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಅನಿಲ್ ಉಪರಿ, ಯುವರಾಜ ತಳವಾರ ಸೇರಿದಂತೆ ಹಲವರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 