ಗ್ರಾ.ಪಂ ನೌಕರರ ಪ್ರತಿಭಟನೆ: ಪಾದಯಾತ್ರೆ ಮೂಲಕ ಮನವಿ
Protest of Gram Panchayat employees: appeal through padayatra
ಜಮಖಂಡಿ 10: ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘಟನೆ ಸಹಯೋಗದಲ್ಲಿ ಗ್ರಾಮ ಪಂಚಾಯತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೆರಿಸಬೇಕೆಂದು ಒತ್ತಾಯಿಸಿ. ನಗರದ ಎ.ಜಿ, ದೇಸಾಯಿ ಸಕಲ್ದಿಂದ ತಾಲೂಕಾಡಳಿತ ಸೌಧದವರೆಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲಿಸಿದರು.
ನಂತರ ಮಾತನಾಡಿದ ಅವರು, ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡಗಳ ಜಾರಿ ವಿರೋಧಿಸಿ, ಕರಡು ಅಧಿಸೂಚನೆಯಲ್ಲಿ ರೂ 31 ಸಾವಿರ ರೂ,ಗಳನ್ನು ನಿಗದಿಪಡಿಸಿ ಅಂತಿಮಗೊಳಿಸಬೇಕು. ಪಿಂಚಣಿ, ಸೇವಾ ಹಿರಿತನ ಭತ್ಯೆ ಹೆಚ್ಚಳ, ಪಂಚಾಯತಿಗೆ ಒಂದು ಎಸ್.ಡಿ.ಎ. 2 ನೇ ಡಿಇಓ ನೇಮಕಾತಿ ಮತ್ತು ಆರೋಗ್ಯ ವಿಮೆ ಜಾರಿಯಾಗಬೇಕು, ಸ್ವಚ್ಛವಾಹಿನಿಯರ ಒಡಂಬಡಿಕೆ ರದ್ದು, ತರಬೇತಿ ಪಡೆದ ಎಲ್ಲರಿಗೂ ಕಡ್ಡಾಯ ಕೆಲಸ ರೂ 7500 ರೂ,ಗಳ ಗೌರವಧನ ನೀಡಬೇಕು,ಸಿಂಗಲ್ ಚಾಲಕರನ್ನು ಪರಿಗಣಿಸಿ 15 ಸಾವಿರ ರೂ,ಗಳ ಗೌರವಧನ ನೀಡಬೇಕೆಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಅನೇಕ ಗ್ರಾಮ ಪಂವಚಾಯತ್ ನೌಕರರು ಇದ್ದರು,
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 