ವಿಜಯಪುರ 16: ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ, ಜಲಾಶಯದ ನೀರಿನ ಮಟ್ಟವನ್ನು 519.60 ರಿಂದ 524.256ಕ್ಕೆ ನೀರು ನಿಲ್ಲಿಸಲು ಗೇಟ್ ಅಳವಡಿಸುವುದು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಸೋಮವಾರದಂದು ವಿಜಯಪುರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಲಮಟ್ಟಿ ಲಾಲ್ಬಹಾದ್ಧೂರ ಶಾಸ್ತ್ರಿ ಜಲಾಶಯ ನೀರಿನ ಮಟ್ಟವನ್ನು ಹೆಚ್ಚಿಸಲು ಒತ್ತಾಯಿಸುವ ಹೋರಾಟ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ದಿನಾಂಕ ಜೂನ್ 30 ರಂದು ಬೆಳಿಗ್ಗೆ 11. ಘಂಟೆಗೆ ನಿಡಗುಂದಿ ಬಳಿ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಮಿತಿ ಮುಖಂಡರಾದ ಅರವಿಂದ ಕುಲಕರ್ಣಿ ಹಾಗೂ ವಿಜಯ ಪೂಜಾರ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಹಾರಾಷ್ಟ್ರ ಸರ್ಕಾರ ದುರುದ್ದೇಶದಿಂದ ಉತ್ತರಕರ್ನಾಟಕದ ರೈತರನ್ನು ಬಲಿ ತೆಗೆದುಕೊಳ್ಳಲು ಹೊರಟಿದೆ, ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 524,256ಕ್ಕೆ ನಿಲ್ಲಿಸಿದರೆ ಮಹಾರಾಷ್ಟ್ರ, ವ್ಯಾಪ್ತಿಯ ಸಾಂಗ್ಲಿ, ಸಾತಾರ, ಮಿರಜ ಸೇರಿದಂತೆ ಕೆಲವು ಜಿಲ್ಲೆಗಳು ಆಲಮಟ್ಟಿಯ ಹಿನ್ನೀರಿನಿಂದ ಪ್ರವಾಹಕ್ಕೆ ತುತ್ತಾಗುತ್ತವೆ' ಎಂದು ತಪ್ಪು ತಿಳುವಳಿಕೆ ಯಿಂದಲೋ ಅಥವಾ ಉದ್ದೇಶ ಪೂರ್ವಕವಾಗಿಯೋ ಹೋರಾಟಕ್ಕಿಳಿದು ಉತ್ತರ ಕರ್ನಾಟಕದ ರೈತರ ವಿರೋಧಿ ಎಂಬುದನ್ನು ಸಾಭೀತುಪಡಿಸಿದ್ದಾರೆ.
ಈ ಹಿಂದೆ ಅಂದರೆ 2019ನೇ ಸಾಲಿನಲ್ಲಿ ಮಹಾರಾಷ್ಟ್ರ, ವ್ಯಾಪ್ತಿಯಲ್ಲಿ ಪ್ರವಾಹ ಬಂದಾಗ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯದ 519.60ಕ್ಕೆ ನೀರು ನಿಲ್ಲಿಸಿದಾಗ ಆಲಮಟ್ಟಿ ಹಿನ್ನೀರಿನಿಂದಲೇ ಪ್ರವಾಹ ಉಂಟಾಗಿದೆ ಎಂದು ಬೊಬ್ಬೆಹೊಡೆದಿದ್ದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರವೇ ತಮ್ಮ ಸರ್ಕಾರದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದ ನಂದಕುಮಾರ ವಡ್ಡರೆ' ಎಂಬುವರನ್ನು ನೇಮಿಸಿ ಅದಕ್ಕೆ ಒಂದು ತಂಡ ರಚನೆ ಮಾಡಿ ಆಲಮಟ್ಟಿಗೆ ಕಳುಹಿಸಿ ಅಧ್ಯಯನ ಮಾಡಿ ವರದಿ ಸಲ್ಲಿಸಲು ತಮ್ಮವರನ್ನ ಕಳುಹಿಸಿತ್ತು. ಮಹಾರಾಷ್ಟ್ರದ ಅಧ್ಯಯನ ತಂಡ ಆಲಮಟ್ಟಿಗೆ ಆಗಮಿಸಿ, ಅಲ್ಲಿಯ ಪರಿಸ್ಥಿತಿಯನ್ನು ಸಂಪೂರ್ಣ ಅಧ್ಯಯನ ಮಾಡಿದ ನಂತರ ಮಹಾರಾಷ್ಟ್ರದಲ್ಲಿ ಪ್ರವಾಹ ಬಂದಿರುವುದು ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಅಲ್ಲ ಎನ್ನುವುದು ಅಧ್ಯಯನದಿಂದ ತಿಳಿದು ಬಂದಿದೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಸ್ಪಷ್ಟ ವರದಿಯನ್ನು ನೀಡಿದ್ದಾರೆ ಆದರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ ಉದ್ದೇಶ ಪೂರ್ವಕವಾಗಿ ಅಲ್ಲಿಯ ರೈತರನ್ನು ಎತ್ತಿಕಟ್ಟಿ ಬೀದಿಗಿಳಿದು ಹೋರಾಟ ಮಾಡಿ ತಮ್ಮ ಬಂಡತನವನ್ನು ಪ್ರದರ್ಶಿಸುತ್ತಿದೆ. ಇದಕ್ಕೆ ಕರ್ನಾಟಕ ಸರ್ಕಾರ ಮಹಾರಾಷ್ಟ್ರ ಸರ್ಕಾರದ ಒತ್ತಡಕ್ಕೆ ಮಣಿಯದೆ ಉತ್ತರ ಕರ್ನಾಟಕದ ರೈತರ ಹಿತ ಕಾಪಾಡಲು ನ್ಯಾಯಾಧೀಕರಣದ ತೀರ್ಿನಂತೆ ಕ್ರಮ ಕೈಗೊಳ್ಳಬೇಕು. 2010ನೇ ಸಾಲನಲ್ಲಿಯೇ ನ್ಯಾ?? ಬ್ರಿಜೇಶ್ ಕುಮಾರ್ ನೇತೃತ್ವದ 2ನೇ ನ್ಯಾಯಾಧೀಕರಣವು ತೀರ್ು ನೀಡಿತು. ಮತ್ತೆ 2013ರಲ್ಲಿ ಅಂತಿಮ ತೀರ್ು ನೀಡಿ ಅಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ, ಜಲಾಶಯದ ನೀರಿನ ಮಟ್ಟವನ್ನು 524.256ಕ್ಕೆ ನಿಲ್ಲಿಸಲು ಗೇಟ್ ಅಳವಡಿಸಲು ಸ್ಪಷ್ಟವಾದ ತೀರ್ು ನೀಡಿದೆ ಆ ತೀರ್ಿನನ್ವಯ ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಮಹಾರಾಷ್ಟ್ರ ಸರ್ಕಾರ ತೆಗೆದಿರುವ ಕ್ಯಾತೆಗೆ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಮಹಾರಾಷ್ಟ್ರ ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಮತ್ತು ಕೇಂದ್ರ ಸರ್ಕಾರವು ಕೂಡಾ ಅಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯದ ನೀರಿನ ಮಟ್ಟವನ್ನು 524.256ಕ್ಕೆ ನಿಲ್ಲಿಸಲು ಕೂಡಲೇ ಅಧಿಸೂಚನೆ ಹೊರಡಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ ಕೇಂದ್ರ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಜಲಾಶಯದ ನೀರಿನ ಮಟ್ಟವನ್ನು 524.256 ಕ್ಕೆ ನೀರು ನಿಲ್ಲಿಸಲು ಗೇಟ್ ಅಳವಡಿಸಬೇಕೆಂದು ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟ ಹೆಚ್ಚಿಸುವ ಹೋರಾಟ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕರಪತ್ರವು ಬಿಡುಗಡೆ ಮಾಡಲಾಯಿತು. ಈ ಹೋರಾಟಕ್ಕೆ ಉತ್ತರ ಕರ್ನಾಟಕದ ಎಲ್ಲ ರೈತಪರ ಸಂಘಟನೆಗಳು ದಲಿತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಹಾಗೂ ನಾಡಿನ ಎಲ್ಲಾ ಮಠಾಧೀಶರು, ಸೇರಿದಂತೆ ರಾಜಕೀಯ ನಾಯಕರು ಕೂಡಾ ಪಕ್ಷಾತೀತವಾಗಿ, ರಾಜಕೀಯ ರಹಿತವಾಗಿ ರೈತ ಕುಲ ಉಳಿವಿಗಾಗಿ ಹೋರಾಟದಲ್ಲಿ ಆಗಮಿಸಬೇಕೆಂದು ಪತ್ರಿಕಾಗೋಷ್ಠಿ ಮುಖಾಂತರ ಮನವಿ ಮಾಡಿಕೊಂಡಿದ್ದಾರೆ.
ರೈತ ಮುಖಂಡರಾದ ವಿಜಯ ಪೂಜಾರ, ಶಂಕರ ಹಿರೇಗೌಡರ, ಶಾರದಾ ಕಾಳಮ್ಮನವರ, ಸುಜಾತ ಬಂಡಿವಡ್ಡರ, ಗುಡುಮಾ ವಾಲೀಕಾರ, ಮಂಜುಳಾ ಹನುಮದ, ನಿಂಗವ್ವ ಸಿಂಗಾನವರ, ಆರ್.ಕೆ. ಕಲಬುರಗಿ, ಬಸವರಾಜ ಗೋನಾಳ ಮುಂತಾದವರು ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.