ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರಚೋದನಾತ್ಮಕ ಭಾಷಣ: ಡಾ ಕಫೀಲ್ ಬಂಧನ
ಲಖನೌ, ಜ 30 ,ಪೌರತ್ವ ತಿದ್ದುಪಡಿ ಕಾಯ್ದೆ -ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗೋರಖ್ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಮಕ್ಕಳ ವೈದ್ಯ ಡಾ.ಕಫೀಲ್ ಅಹ್ಮದ್ ಖಾನ್ ಅವರನ್ನು ಬುಧವಾರ ತಡರಾತ್ರಿ ಮುಂಬೈನಲ್ಲಿ ಬಂಧಿಸಲಾಗಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಅವರು (ಎಎಂಯು) ಪ್ರಚೋದನಾತ್ಮಕ ಭಾಷಣ ಮಾಡಿದ್ದರು.
ಕಫೀಲ್ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ವಿಚಾರಣೆಗಾಗಿ ಲಖನೌಗೆ ಕರೆತರಲಾಗುತ್ತಿದೆ ಎಂದು ಎಸ್ಟಿಎಫ್ ಪೊಲೀಸ್ ಮಹಾನಿರ್ದೇಶಕ ಅಮಿತಾಭ್ ಯಶ್ ಗುರುವಾರ ಇಲ್ಲಿ ತಿಳಿಸಿದ್ದಾರೆ. ಇಬ್ಬರು ಎಸ್ಟಿಎಫ್ ಅಧಿಕಾರಿಗಳು - ಇನ್ಸ್ಪೆಕ್ಟರ್ ಬ್ರಿಜೇಂದ್ರ ಶರ್ಮಾ ಮತ್ತು ಇನ್ಸ್ಪೆಕ್ಟರ್ ಪ್ರಮೋದ್ ವರ್ಮಾ ಮುಂಬೈನಲ್ಲಿ ಡಾ ಕಫೀಲ್ ಅವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಗೋರಖ್ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ 2017ರಲ್ಲಿ ಆಮ್ಲಜನಕದ ಕೊರತೆಯಿಂದಾಗಿ, 60ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಫೀಲ್ ಅವರನ್ನು ಅಮಾನತುಗೊಳಿಸಿ, ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಯುಪಿ ಸರ್ಕಾರದ ವರದಿಯು ಎಲ್ಲಾ ಪ್ರಮುಖ ಆರೋಪಗಳಿಂದ ಮುಕ್ತವಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 