ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರಚೋದನಾತ್ಮಕ ಭಾಷಣ: ಡಾ ಕಫೀಲ್ ಬಂಧನ
ಲಖನೌ, ಜ 30 ,ಪೌರತ್ವ ತಿದ್ದುಪಡಿ ಕಾಯ್ದೆ -ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗೋರಖ್ಪುರದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಮಕ್ಕಳ ವೈದ್ಯ ಡಾ.ಕಫೀಲ್ ಅಹ್ಮದ್ ಖಾನ್ ಅವರನ್ನು ಬುಧವಾರ ತಡರಾತ್ರಿ ಮುಂಬೈನಲ್ಲಿ ಬಂಧಿಸಲಾಗಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಅವರು (ಎಎಂಯು) ಪ್ರಚೋದನಾತ್ಮಕ ಭಾಷಣ ಮಾಡಿದ್ದರು.
ಕಫೀಲ್ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ವಿಚಾರಣೆಗಾಗಿ ಲಖನೌಗೆ ಕರೆತರಲಾಗುತ್ತಿದೆ ಎಂದು ಎಸ್ಟಿಎಫ್ ಪೊಲೀಸ್ ಮಹಾನಿರ್ದೇಶಕ ಅಮಿತಾಭ್ ಯಶ್ ಗುರುವಾರ ಇಲ್ಲಿ ತಿಳಿಸಿದ್ದಾರೆ. ಇಬ್ಬರು ಎಸ್ಟಿಎಫ್ ಅಧಿಕಾರಿಗಳು - ಇನ್ಸ್ಪೆಕ್ಟರ್ ಬ್ರಿಜೇಂದ್ರ ಶರ್ಮಾ ಮತ್ತು ಇನ್ಸ್ಪೆಕ್ಟರ್ ಪ್ರಮೋದ್ ವರ್ಮಾ ಮುಂಬೈನಲ್ಲಿ ಡಾ ಕಫೀಲ್ ಅವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಗೋರಖ್ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ 2017ರಲ್ಲಿ ಆಮ್ಲಜನಕದ ಕೊರತೆಯಿಂದಾಗಿ, 60ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಫೀಲ್ ಅವರನ್ನು ಅಮಾನತುಗೊಳಿಸಿ, ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಯುಪಿ ಸರ್ಕಾರದ ವರದಿಯು ಎಲ್ಲಾ ಪ್ರಮುಖ ಆರೋಪಗಳಿಂದ ಮುಕ್ತವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 