ಡಾ. ಅಂಬೇಡ್ಕರ್ ನಿವಾಸದ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
ಬೆಳಗಾವಿ ಜುಲೈ 10: ನೆರೆಯ ಮಹಾರಷ್ಟ್ರದ ಮುಂಬಯಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ವಾಸವಾಗಿದ್ದ ನಿವಾಸದ ಮೇಲೆ ಕಿಡಿಗೇಡಿಗಳಿಂದ ನಡೆದ ಹಲ್ಲೆ ಖಂಡಿಸಿ ಡಾ. ಅಂಬೇಡ್ಕರ್ ಯುವ ಮಂಚ, ಡಾ. ಅಂಬೇಡ್ಕರ್ ಯುವ ಸೇನೆ, ಬುದ್ಧಿಸ್ಟ್ ಸೊಸೈಟಿ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮಹಾರಾಷ್ಟ್ರ ಸಕರ್ಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಶುಕ್ರವಾರ ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ದಲಿತ ಸಂಘಟನೆಗಳ ಕಾರ್ಯಕರ್ತರು ಈ ಕುರಿತು ಜಿಲ್ಲಾಧಿಕಾರಿಗಳ ಮುಖಾಂತರ ಮಹಾರಾಷ್ಟ್ರ ಸರಕಾರಕ್ಕೆ ಮನವಿಯೊಂದನ್ನು ಸಲ್ಲಿಸಿ, ಮುಂಬಯಿ ನಗರದ ದಾದರ್ ಪ್ರದೇಶದಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನಿವಾಸ ರಾಜಗೃಹದ ಮೇಲೆ ಕಿಡಿಗೇಡಿಗಳ ಹಲ್ಲೆ ಖಂಡಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೆ ಕಿಡಿಗೇಡಿಗಳು ಮತ್ತು ಸಕರ್ಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆಯಲ್ಲಿ ಕೆಲವು ದಲಿತ ಸಂಘಟನೆಯ ಮುಖಂಡರು ಮಾತನಾಡಿ, ಡಾ. ಅಂಬೇಡ್ಕರ್ ನಿವಾಸದ ಮೇಲೆ ನಡೆಸಿದ ಹಲ್ಲೆ ಎಲ್ಲ ದಲಿತರ ಮನೆಗಳ ಮೇಲೆ, ಹೃದಯಗಳ ಮೇಲೆ ನಡೆಸಿದ ಹಲ್ಲೆಯಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಸಕರ್ಾರಗಳು ಅದಕ್ಕಿಂತ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಲ್ಲೇಶ ಚೌಗಲೆ ಸೇರಿದಂತೆ ಅನೇಕು ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 