ಸೆ.5 ರಂದು ಪ್ರಜಾಸೇವೆ ಆಂದೋಲನಕ್ಕೆ ಚಾಲನೆ : ಜೂಗಲ್ ಮಂಜುನಾಯಕ
Public service movement launched on September 5: Jugal Manjunayak
ಲೋಕದರ್ಶನ ವರದಿ
ಕಂಪ್ಲಿ 03 : ಸರ್ಕಾರದ ಮಹಾತ್ವಾಂಕ್ಷಿ ಯೋಜನೆಗಳಲ್ಲೊಂದಾದ ಪ್ರಜಾಸೇವೆ ಆಂದೋಲನಾದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಸಂಪೂರ್ಣ ಮಾಹಿತಿಯೊಂದಿಗೆ ಪಾಲ್ಗೊಳ್ಳುವಂತೆ ತಹಸಿಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು. ಅವರು ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಏರಿ್ಡಸಿದ್ದ ಪ್ರಜಾಸೇವೆ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಸೆ.5 ರಂದು ಬೆಳಿಗ್ಗೆ 10 ಗಂಟೆಗೆ ಮಾರುತಿ ನಗರದ ಪುರಸಭೆಯ ಸಮುದಾಯ ಭವನದಲ್ಲಿ ಶಾಸಕ ಜೆ.ಎನ್.ಗಣೇಶ್ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನಾ ಕಾರ್ಯಕ್ರಮ ಏರಿ್ಡಸಿದ್ದು, ಸಾರ್ವಜನಕರ ಕುಂದು- ಕೊರತೆಗಳಿಗೆ ಸೂಕ್ತವಾಗಿ ಸ್ಪಂದಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದ ಅವರು ನಂತರ ಆಂದೋಲನ ಸಿದ್ಧತೆ ಕುರಿತು ಸಮಾಲೋಚನೆ ನಡೆಸಲಾಯಿತು. ಸಭೆಯಲ್ಲಿ ತಾ.ಪಂ. ಆರ್.ಕೆ.ಶ್ರೀಕುಮಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಎ.ಶ್ರೀನಿವಾಸ್, ಜೆ.ಪ್ರದೀಪ್, ಆನಂದ್ ಪೆಮ್ಮಾರ್, ಎಸ್.ಚೇತನ್ ಕುಮಾರ್ ನಾಯಕ, ಬಿ.ವಿರೂಪಾಕ್ಷಗೌಡ, ಎಸ್.ಬಿ.ಶ್ರೀನಿವಾಸ, ಬಿ.ವಿ.ಅನುಪಮ, ಗಾದಿಲಿಂಗಪ್ಪ, ವೀರೇಶ್ ಎಚ್.ಮಾಶೆಟ್ಟಿ, ಟಿ.ಎಂ.ಬಸವರಾಜ,ಭೀಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 