ಸಾರ್ವಜನಿಕವಾಗಿ ಕಣ್ಣೀರಿಟ ಅಶೋಕ ಪೂಜೇರಿ
ಲೋಕದರ್ಶನ ವರದಿ
ಗೋಕಾಕ: ಚುನಾವಣೆಯಿಂದ ಹಿಂದೆ ಸರಿಯಲು ಹಣ ಪಡೆದಿದ್ದಾರೆ ಎಂಬ ಆರೋಪ ಹಿನ್ನೆಲೆ, ಬಿಜೆಪಿ ಮುಖಂಡ ಅಶೋಕ ಪೂಜೇರಿ ಅವರು ನೊಂದು ಸಾರ್ವಜನಿಕವಾಗಿ ಗಳಗಳನೇ ಕಣ್ಣೀರಿಟ್ಟರು.
ಅವರು, ಶನಿವಾರದಂದು ನಗರದ ಜ್ಞಾನಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಉಪಚುನಾವಣೆ ಹಿನ್ನೆಲೆ ಕರೇದ ಬೆಂಬಲಿಗರ ಸಭೆಯಲ್ಲಿ ಸಾರ್ವಜನಿಕವಾಗಿ ಗಳಗಳನೇ ಅತ್ತು ಬೆಂಬಲಿಗರ ಎದುರು ಎರಡು ಕೊಡ ಮೈಮೇಲೆ ನೀರು ಸುರಿದುಕೊಂಡು, ಕಣ್ಣೀರಿಟ್ಟು ಸಂಗಮನಾಥನ ಮೇಲೆ ಪ್ರಮಾಣ ಮಾಡಿದರು.
ಸಭೆ ಬಳಿಕ ನಾನು ಯಾರ ಬಳಿಯೂ ಒಂದು ರೂಪಾಯಿ ಕೂಡ ಪಡೆದಿಲ್ಲ. ಮೂರು ಚುನಾವಣೆಗಳಲ್ಲಿ 30 ಎಕರೆ ಹೊಲ ಮಾರಿ, ಕೋಟ್ಯಂತರ ಸಾಲ ಮಾಡಿಕೊಂಡಿದ್ದೇನೆ. ಚುನಾವಣೆಯಿಂದ ಹಿಂದೆ ಸರಿಯಲು ನಾನು ಯಾರ ಬಳಿಯೂ ಒಂದು ರೂಪಾಯಿ ಹಣ ಪಡೆದಿಲ್ಲ ಎಂದು ನೊಂದು ಕಣ್ಣೀರಿಟ್ಟು, ಅಶೋಕ ಪೂಜೇರಿ ದೇವರ ಮೇಲೆ ಪ್ರಮಾಣ ಮಾಡಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 