ಸಾರ್ವಜನಿಕವಾಗಿ ಕಣ್ಣೀರಿಟ ಅಶೋಕ ಪೂಜೇರಿ
ಲೋಕದರ್ಶನ ವರದಿ
ಗೋಕಾಕ: ಚುನಾವಣೆಯಿಂದ ಹಿಂದೆ ಸರಿಯಲು ಹಣ ಪಡೆದಿದ್ದಾರೆ ಎಂಬ ಆರೋಪ ಹಿನ್ನೆಲೆ, ಬಿಜೆಪಿ ಮುಖಂಡ ಅಶೋಕ ಪೂಜೇರಿ ಅವರು ನೊಂದು ಸಾರ್ವಜನಿಕವಾಗಿ ಗಳಗಳನೇ ಕಣ್ಣೀರಿಟ್ಟರು.
ಅವರು, ಶನಿವಾರದಂದು ನಗರದ ಜ್ಞಾನಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಉಪಚುನಾವಣೆ ಹಿನ್ನೆಲೆ ಕರೇದ ಬೆಂಬಲಿಗರ ಸಭೆಯಲ್ಲಿ ಸಾರ್ವಜನಿಕವಾಗಿ ಗಳಗಳನೇ ಅತ್ತು ಬೆಂಬಲಿಗರ ಎದುರು ಎರಡು ಕೊಡ ಮೈಮೇಲೆ ನೀರು ಸುರಿದುಕೊಂಡು, ಕಣ್ಣೀರಿಟ್ಟು ಸಂಗಮನಾಥನ ಮೇಲೆ ಪ್ರಮಾಣ ಮಾಡಿದರು.
ಸಭೆ ಬಳಿಕ ನಾನು ಯಾರ ಬಳಿಯೂ ಒಂದು ರೂಪಾಯಿ ಕೂಡ ಪಡೆದಿಲ್ಲ. ಮೂರು ಚುನಾವಣೆಗಳಲ್ಲಿ 30 ಎಕರೆ ಹೊಲ ಮಾರಿ, ಕೋಟ್ಯಂತರ ಸಾಲ ಮಾಡಿಕೊಂಡಿದ್ದೇನೆ. ಚುನಾವಣೆಯಿಂದ ಹಿಂದೆ ಸರಿಯಲು ನಾನು ಯಾರ ಬಳಿಯೂ ಒಂದು ರೂಪಾಯಿ ಹಣ ಪಡೆದಿಲ್ಲ ಎಂದು ನೊಂದು ಕಣ್ಣೀರಿಟ್ಟು, ಅಶೋಕ ಪೂಜೇರಿ ದೇವರ ಮೇಲೆ ಪ್ರಮಾಣ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 