ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಪೂಜಾರ ಭಾಜನ

ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಪೂಜಾರ ಭಾಜನ  Pujara selected for the Rajiv Gandhi State-Level Best Teacher Award


ಶಿಗಗಾಂವಿ, ಸೆ. 6: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಗಗಾವಿಯ ಶ್ರೀ ರಂಭಾಪುರಿ ಜಗದ್ಗುರುಗಳ ಪಿಯು ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರೊ. ಶಿವಯ್ಯ ಪೂಜಾರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.  

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಶಸ್ತಿ ಪ್ರದಾನ ಮಾಡಿ, ಶಿವಯ್ಯ ಪೂಜಾರ ಅವರ ಶೈಕ್ಷಣಿಕ ಸೇವೆಯನ್ನು ಗೌರವಿಸಿದರು.  ಪ್ರಶಸ್ತಿ ಪುರಸ್ಕೃತ ಪ್ರೊ. ಶಿವಯ್ಯ ಪೂಜಾರ ಅವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.